ಬೀದರ್: ಇಲ್ಲಿಯ ಪಶು ವೈದ್ಯರು ನೆರೆ ಪೀಡಿತ ಕೊಡಗು ಜಿಲ್ಲೆಯ ಜಾನುವಾರುಗಳಿಗೆ ಸಹಾಯಹಸ್ತ ಚಾಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಕರ್ನಾಟಕ ಪಶು ವೈದ್ಯಕೀಯ ಸಂಘದ ರಾಜ್ಯ ಘಟಕದ ವತಿಯಿಂದ 22.5 ಕ್ವಿಂಟಲ್ ಹಾಗೂ ಬೀದರ್ ಜಿಲ್ಲಾ ಘಟಕದ ವತಿಯಿಂದ 7.5 ಕ್ವಿಂಟಲ್ ಪಶು ಆಹಾರ ಹಾಗೂ ಲವಣ ಮಿಶ್ರಣ ಜೀಪ್ನಲ್ಲಿ ಕೊಡಗಿಗೆ ಕಳುಹಿಸಿದ್ದಾರೆ.
ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಾ. ಶಿವಶರಣಪ್ಪ ಯಲಗೂಡ, ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪಾಟೀಲ, ಪ್ರಧಾನ ಕಾರ್ಯದರ್ಶಿ ಡಾ. ನೀಲಕಂಠ ಚನಶೆಟ್ಟಿ, ಖಜಾಂಚಿ ಗಣಾಧೀಶ್ವರ ಹಿರೇಮಠ, ಡಾ. ಮಹಿಪಾಲ್ಸಿಂಗ್ ಠಾಕೂರ್, ಡಾ. ಸೋಮಶೇಖರ, ಪಶು ಪಾಲನೆ ಹಾಗೂ ವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ. ರವಿ ಭೂರೆ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.