ADVERTISEMENT

ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ಕಲ್ಪಿಸಲು ಮನವಿ

​ಪ್ರಜಾವಾಣಿ ವಾರ್ತೆ
Published 17 ಜುಲೈ 2021, 4:01 IST
Last Updated 17 ಜುಲೈ 2021, 4:01 IST
ಭಾಲ್ಕಿಯ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‍ಗೆ ಪುರಸಭೆ ಮುಖ್ಯಾಧಿಕಾರಿ ಡಾ.ಶಿವರಾಜ ರಾಠೋಡ್ ಭೇಟಿ ನೀಡಿ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಮಂಜೂರು ಮಾಡುವಂತೆ ಮನವಿ ಮಾಡಿದರು
ಭಾಲ್ಕಿಯ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‍ಗೆ ಪುರಸಭೆ ಮುಖ್ಯಾಧಿಕಾರಿ ಡಾ.ಶಿವರಾಜ ರಾಠೋಡ್ ಭೇಟಿ ನೀಡಿ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಮಂಜೂರು ಮಾಡುವಂತೆ ಮನವಿ ಮಾಡಿದರು   

ಭಾಲ್ಕಿ: ಪಟ್ಟಣದ ವಿವಿಧ ಬ್ಯಾಂಕ್‌ಗಳಿಗೆ ಗುರುವಾರ ಪುರಸಭೆ ಮುಖ್ಯಾಧಿಕಾರಿ ಡಾ.ಶಿವರಾಜ ರಾಠೋಡ್ ಅವರು ಭೇಟಿ ನೀಡಿ ಬೀದಿ ಬದಿ ವ್ಯಾಪಾರಿಗಳಿಗೆ ಸಕಾಲಕ್ಕೆ ಸಾಲ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿದರು.

ಬೀದಿ ಬದಿ ವ್ಯಾಪಾರಿಗಳ ಸಂಘ ಸಾಲ ಸೌಲಭ್ಯ ನೀಡಲು ಬ್ಯಾಂಕ್‍ಗಳು ವಿಳಂಬ ಮಾಡುತ್ತಿರುವ ಬಗ್ಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಪಟ್ಟಣದ ಇಂಡಿಯನ್ ಓವರ್‌ಸೀಸ್ ಬ್ಯಾಂಕ್, ಕರ್ನಾಟಕ ಗ್ರಾಮೀಣ ಪ್ರಗತಿ ಬ್ಯಾಂಕ್ ಸೇರಿ ವಿವಿಧ ಬ್ಯಾಂಕ್‌ಗಳಿಗೆ ಭೇಟಿ ನೀಡಿ ವ್ಯವಸ್ಥಾಪಕರನ್ನು ಸಂಪರ್ಕಿಸಿ ಕೇಂದ್ರದ ಆತ್ಮನಿರ್ಭರ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ತಲಾ ₹10 ಸಾವಿರ ಸಾಲ ಸೌಲಭ್ಯ ಕಲ್ಪಿಸಿದೆ. ನೋಂದಾಯಿತ ಎಲ್ಲ ಬೀದಿ ಬದಿ ವ್ಯಾಪಾರಿಗಳಿಗೆ ನೀಡುವಂತೆ ಮನವಿ ಮಾಡಿದರು.

ಇಲ್ಲಿವರೆಗೂ ಸಾಲ ಸೌಲಭ್ಯಕ್ಕಾಗಿ ವಿವಿಧ ಬ್ಯಾಂಕ್‍ಗಳಲ್ಲಿ 275 ಬೀದಿ ಬದಿ ವ್ಯಾಪಾರಿಗಳು ಆನ್‌ಲೈನ್ ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ 142 ಫಲಾನುಭವಿಗಳಿಗೆ ಸಾಲ ಸೌಲಭ್ಯ ಸಿಕ್ಕಿದೆ. ಇನ್ನೂ 133 ಫಲಾನುಭವಿಗಳಿಗೆ ಸಾಲ ಸಿಕ್ಕಿಲ್ಲ. ತಾಂತ್ರಿಕ ದೋಷಗಳನ್ನು ಸರಿಪಡಿಸಿ ತಕ್ಷಣ ಎಲ್ಲರಿಗೂ ಸಾಲ ಸೌಲಭ್ಯ ನೀಡುವಂತೆ ಮನವಿ ಮಾಡಿದರು. ಪುರಸಭೆ ಸಮುದಾಯ ಸಂಘಟಕ ಸ್ವಾಮಿದಾಸ್, ಜಿಲ್ಲಾ ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ದಿಲೀಪ ಜೋಳದಾಪಕೆ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.