ADVERTISEMENT

ಕನ್ನಡ ಜಾನಪದ ಪರಿಷತ್ತಿಗೆ ನೇಮಕ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2022, 11:32 IST
Last Updated 3 ಡಿಸೆಂಬರ್ 2022, 11:32 IST
ಶೇಷರಾವ್
ಶೇಷರಾವ್   

ಬೀದರ್‌: ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಶೇಷರಾವ್ ಸೋಪಾನರಾವ್ ಬೆಳಕುಣಿಕರ್ ಹಾಗೂ ಕಾರ್ಯಾಧ್ಯಕ್ಷರಾಗಿ ಆರ್.ಕೆ.ಚಾರಿ ನೇಮಕಗೊಂಡಿದ್ದಾರೆ.

ನಗರ ಕೇಂದ್ರಿತ ಜಾನಪದ ಚಟುವಟಿಕೆಗಳನ್ನು ಜಿಲ್ಲಾ ಮಟ್ಟಕ್ಕೆ ಕೊಂಡೊಯ್ಯುವ ಸಲುವಾಗಿ ಜಿಲ್ಲಾ ಸಮಿತಿ ರಚಿಸಲಾಗಿದೆ. ಗ್ರಾಮ ಮಟ್ಟದಲ್ಲೂ ಸಮಿತಿಗಳನ್ನು ರಚಿಸಿ, ಜಾನಪದ ಚಟುವಟಿಕೆಗಳನ್ನು ಕ್ರಿಯಾಶೀಲವಾಗಿ ಮುನ್ನಡೆಸುವ ಸಲುವಾಗಿ ಜಿಲ್ಲಾ ಘಟಕಕ್ಕೆ ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ಎಸ್.ಬಾಲಾಜಿ ತಿಳಿಸಿದ್ದಾರೆ.

ಕನ್ನಡ ಜಾನಪದ ಪರಿಷತ್ತು ಕರ್ನಾಟಕ ರಾಜ್ಯದಾದ್ಯಂತ ಜಾನಪದ ಕಲೆಗಳ ಕ್ಷೇತ್ರ ಕಾರ್ಯ, ದಾಖಲಿಕರಣ, ತರಬೇತಿ, ಪ್ರಕಟಣೆಗಳು, ವಸ್ತು ಸಂಗ್ರಹ, ಧ್ವನಿ ಮುದ್ರಣ, ಜಾನಪದ ಕಲಾವಿದರ ಮಾನ, ಸನ್ಮಾನ ಪ್ರಶಸ್ತಿ ಪ್ರದಾನ ಇತ್ಯಾದಿ ಕೆಲಸಗಳನ್ನು ನಿರ್ವಹಿಸಿಕೊಂಡು ಬರುತ್ತಿದೆ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.