ADVERTISEMENT

ತೀಸ್ರಿ ಆಂಖ್ ಮಾನವ ಹಕ್ಕು ಸಂಘಟನೆಗೆ ನೇಮಕ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2023, 13:11 IST
Last Updated 11 ಫೆಬ್ರುವರಿ 2023, 13:11 IST
ಬೀದರ್‌ನಲ್ಲಿ ತೀಸ್ರಿ ಆಂಖ್ ಮಾನವ ಹಕ್ಕು ಸಂಘಟನೆಯ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು
ಬೀದರ್‌ನಲ್ಲಿ ತೀಸ್ರಿ ಆಂಖ್ ಮಾನವ ಹಕ್ಕು ಸಂಘಟನೆಯ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು   

ಬೀದರ್: ತೀಸ್ರಿ ಆಂಖ್ ಮಾನವ ಹಕ್ಕು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷರಾಗಿ ವಿಠ್ಠಲರಾವ್ ಹೈಬತ್ತಿ ಹಾಗೂ ಉಪಾಧ್ಯಕ್ಷರಾಗಿ ಈಶ್ವರ ಹೈಬತ್ತಿ ಅವರನ್ನು ನೇಮಕ ಮಾಡಲಾಗಿದೆ.
ಸಂಘಟನೆಯ ರಾಜ್ಯ ಅಧ್ಯಕ್ಷ ಬಸವರಾಜ ಎ. ಅವರು ನಗರದಲ್ಲಿ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಿಸಿದರು.
ಮಾನವ ಹಕ್ಕುಗಳ ಜಾಗೃತಿ ಹಾಗೂ ರಕ್ಷಣೆ ಸಂಘಟನೆಯ ಮೂಲ ಉದ್ದೇಶವಾಗಿದೆ. ನೂತನ ಪದಾಧಿಕಾರಿಗಳು ಅದಕ್ಕೆ ಅನುಗುಣವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಅಂಚೆ ನೌಕರರ ರಾಷ್ಟ್ರೀಯ ಒಕ್ಕೂಟದ ಮಹಿಳಾ ಸಮಿತಿ ಅಧ್ಯಕ್ಷೆ ಮಂಗಲಾ ಭಾಗವತ್ ಅವರು ಮಾನವ ಹಕ್ಕುಗಳ ಜಾಗೃತಿಯ ಅಗತ್ಯತೆ ಕುರಿತು ಮಾತನಾಡಿದರು.
ತೀಸ್ರಿ ಆಂಖ್ ಮಾನವ ಹಕ್ಕು ಸಂಘಟನೆಯ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸಂಗೀತಾ ಕೋರೆ, ಸಂಗಪ್ಪ ಚಿದ್ರಿ, ಡಾ. ವಿಜಯಕುಮಾರ ಹೈಬತ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.