ADVERTISEMENT

ಕಸಾಪ ಚುನಾವಣೆಗೆ ಅತಿವಾಳೆ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2021, 14:07 IST
Last Updated 25 ಫೆಬ್ರುವರಿ 2021, 14:07 IST
ಸಂಜೀವಕುಮಾರ ಅತಿವಾಳೆ
ಸಂಜೀವಕುಮಾರ ಅತಿವಾಳೆ   

ಬೀದರ್: ಮೇ 9 ರಂದು ನಡೆಯಲಿರುವ ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಲಿದ್ದೇನೆ ಎಂದು ಕಸಾಪ ಜಿಲ್ಲಾ ಘಟಕದ ನಿಕಟಪೂರ್ವ ಗೌರವ ಕಾರ್ಯದರ್ಶಿ ಸಂಜೀವಕುಮಾರ ಅತಿವಾಳೆ ತಿಳಿಸಿದ್ದಾರೆ.

ಹಿರಿಯರು, ಸ್ನೇಹಿತರು, ಕನ್ನಡ ಕಾರ್ಯಕರ್ತರು ಹಾಗೂ ಅಜೀವ ಸದಸ್ಯರ ಒತ್ತಾಯದ ಕಾರಣ ಸ್ಪರ್ಧಾ ಕಣಕ್ಕೆ ಇಳಿಯಲು ತೀರ್ಮಾನಿಸಿದ್ದೇನೆ ಎಂದು ಹೇಳಿದ್ದಾರೆ.

ಕರುನಾಡು ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆಯ ಗೌರವಾಧ್ಯಕ್ಷನಾಗಿ, ಸಾಹಿತಿಯಾಗಿ, ಸಂಪನ್ಮೂಲ ವ್ಯಕ್ತಿಯಾಗಿ, ಶಿಕ್ಷಕನಾಗಿ 20 ವರ್ಷಗಳಿಂದ ಕನ್ನಡ ನಾಡು, ನುಡಿಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.
ತಮ್ಮ 10 ಅಂಶಗಳ ಚುನಾವಣಾ ಪ್ರಣಾಳಿಕೆಯನ್ನೂ ಅವರು ಬಿಡುಗಡೆ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.