ADVERTISEMENT

ಬೀದರ್ | ಜೆಸಿಬಿ ಬಳಸಿ ಬ್ಯಾಂಕ್‌ ಕಳವಿಗೆ ಯತ್ನ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2020, 2:52 IST
Last Updated 12 ಫೆಬ್ರುವರಿ 2020, 2:52 IST
ಸಂತಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ಸಂಗಮ ಗ್ರಾಮಕ್ಕೆ ತೆರಳುವ ರಸ್ತೆ ಸಮೀಪದಲ್ಲಿನ ಎಸ್‍ಬಿಐ ಬ್ಯಾಂಕ್‍ನ ಕಿಟಕಿಯನ್ನು ಜೆಸಿಬಿ ಯಂತ್ರದಿಂದ ಕಳ್ಳರು ಒಡೆದಿರುವ ದೃಶ್ಯ 
ಸಂತಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ಸಂಗಮ ಗ್ರಾಮಕ್ಕೆ ತೆರಳುವ ರಸ್ತೆ ಸಮೀಪದಲ್ಲಿನ ಎಸ್‍ಬಿಐ ಬ್ಯಾಂಕ್‍ನ ಕಿಟಕಿಯನ್ನು ಜೆಸಿಬಿ ಯಂತ್ರದಿಂದ ಕಳ್ಳರು ಒಡೆದಿರುವ ದೃಶ್ಯ    

ಕಮಲನಗರ (ಬೀದರ್‌ ಜಿಲ್ಲೆ): ತಾಲ್ಲೂಕಿನ ಸಂತಪುರ ಗ್ರಾಮದಲ್ಲಿರುವ ಎಸ್‌ಬಿಐ ಶಾಖೆಯಿಂದ ಸೋಮವಾರ ರಾತ್ರಿ ಕಳ್ಳರು ಜೆಸಿಬಿ ಯಂತ್ರ ಬಳಸಿ ಬಂಗಾರ ಹಾಗೂ ಹಣ ಕಳವು ಮಾಡಲು ಯತ್ನಿಸಿದ್ದಾರೆ.

ಕಳ್ಳರು ಜೆಸಿಬಿ ಯಂತ್ರದಿಂದ ಕಿಟಕಿ ಒಡೆದು ಒಳ ನುಗ್ಗಿದ್ದಾರೆ. ತಿಜೋರಿ ಒಡೆಯಲು ಹೋದಾಗ ಬ್ಯಾಂಕ್‍ನ ಆಪತ್ಕಾಲಿನ ಸೈರನ್ ಮೊಳಗಿದ್ದು, ಅದನ್ನು ಕೇಳಿಸಿಕೊಂಡ ಸುತ್ತಮುತ್ತಲಿನ ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಂತಪುರ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಪೊಲೀಸರು ಬರುವುದನ್ನು ಕಂಡು ಕಳ್ಳರು, ಜೆಸಿಬಿ ಯಂತ್ರವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಬ್ಯಾಂಕ್‍ನಲ್ಲಿ ಯಾವುದೇ ವಸ್ತು ಕಳವು ಆಗಿಲ್ಲ ಎಂದು ಮೂಲಗಳು ತಿಳಿಸಿವೆ.

ADVERTISEMENT

ಸ್ಥಳಕ್ಕೆ ಭಾಲ್ಕಿ ಡಿವೈಎಸ್‍ಪಿ ಡಾ.ದೇವರಾಜ, ಔರಾದ್ ಸಿಪಿಐ ಶ್ರೀಕಾಂತ ಅಲ್ಲಾಪುರೆ, ಕಮಲನಗರ ಸಿಪಿಐ ಪಾಲಕ್ಷಯ್ಯ ಹಿರೇಮಠ, ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.