ADVERTISEMENT

ಔರಾದ್: ಎಟಿಎಂ ಕಿತ್ತೊಯ್ದ ಕಳ್ಳರು

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2021, 9:55 IST
Last Updated 27 ಏಪ್ರಿಲ್ 2021, 9:55 IST
   

ಔರಾದ್: ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಉಪ್ಪೆ ಪೆಟ್ರೋಲ್ ಬಂಕ್ ಎದುರಿನ ಮಳಿಗೆಯಲ್ಲಿ ಅಳವಡಿಸಿದ್ದ ಎಟಿಎಂ ಯಂತ್ರವನ್ನೇ ಕಳ್ಳರು ಕಿತ್ತೊಯ್ದಿದ್ದಾರೆ.

ಮಂಗಳವಾರ ನಸುಕಿನ ಜಾವ ಕೃತ್ಯ ನಡೆದಿರುವ ಮಾಹಿತಿ‌ ಇದೆ. ಸಿಸಿಟಿವಿ ಕ್ಯಾಮೆರಾ ಧ್ವಂಸಗೊಳಿಸಿ ಟಾಟಾ ಕಂಪನಿಯ ಇಂಡಿಕ್ಯಾಶ್ ಮಷಿನ್ ಕಿತ್ತು ವಾಹನದಲ್ಲಿ ಹಾಕಿಕೊಂಡು ‌ಪರಾರಿಯಾಗಿರುವ ಸುಳಿವು ಸಿಕ್ಕಿದೆ ಎಂದು ಪೋಲಿಸರು ತಿಳಿಸಿದ್ದಾರೆ.

ಸ್ಥಳಕೆ ಇಂಡಿಕ್ಯಾಶ್ ಕಂಪನಿ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಔರಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.