ADVERTISEMENT

ಕಲಾವಿದ ಶೇಷಪ್ಪ ಚಿಟ್ಟಾಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2021, 15:30 IST
Last Updated 26 ಮಾರ್ಚ್ 2021, 15:30 IST
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೀದರ್‌ನ ರಂಗ ಭೂಮಿ ಕಲಾವಿದ ಶೇಷಪ್ಪ ಚಿಟ್ಟಾ ಅವರಿಗೆ ಸುವರ್ಣ ಕರ್ನಾಟಕ ಕಲಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೀದರ್‌ನ ರಂಗ ಭೂಮಿ ಕಲಾವಿದ ಶೇಷಪ್ಪ ಚಿಟ್ಟಾ ಅವರಿಗೆ ಸುವರ್ಣ ಕರ್ನಾಟಕ ಕಲಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು   

ಬೀದರ್: ಜಿಲ್ಲೆಯ ರಂಗಭೂಮಿ ಕಲಾವಿದ ಶೇಷಪ್ಪ ಚಿಟ್ಟಾ ಅವರಿಗೆ ಸುವರ್ಣ ಕರ್ನಾಟಕ ಕಲಾರತ್ನ ಪ್ರಶಸ್ತಿ ಲಭಿಸಿದೆ.

ಕರ್ನಾಟಕ ನವಚೇತನ ಕಲಾ ನಿಕೇತನ ಹಾಗೂ ಅಂಜನಾದ್ರಿ ನೇಕಾರರ ಸೇವಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಜಾನಪದ ಮೇಳದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಜಿಲ್ಲೆಯ ಹಿರಿಯ ಕಲಾವಿದರಾದ ಕಾವೇರಿ ಹುಮನಾಬಾದ್, ರಾಚಯ್ಯ ಸ್ವಾಮಿ ಚಳಕಾಪುರೆ, ಹಣಮಂತರಾವ್ ಜೈನಾಪುರೆ ಹಾಗೂ ಘಾಳೆಪ್ಪ ಮಾಸೂಲ್ದಾರ್ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು ಎಂದು ಕಲಾವಿದ ದೇವದಾಸ ಚಿಮಕೋಡ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.