ಬಸವಕಲ್ಯಾಣ: ನಗರದಲ್ಲಿ ಶನಿವಾರ ನಡೆದ 43ನೇ ಅನುಭವ ಮಂಟಪ ಉತ್ಸವದಲ್ಲಿ ಸಾಹಿತಿ ಡಾ.ಕಲ್ಯಾಣರಾವ್ ಪಾಟೀಲ ಅವರಿಗೆ ‘ಡಾ.ಎಂ.ಎಂ.ಕಲಬುರ್ಗಿ ಸಂಶೋಧನಾ ಪ್ರಶಸ್ತಿ’ ಹಾಗೂ ಸಾಹಿತಿ ಡಾ.ಸೋಮನಾಥ ಯಾಳವಾರ ಅವರಿಗೆ ‘ಡಾ.ಚನ್ನಬಸವ ಪಟ್ಟದ್ದೇವರು ಅನುಭವ ಮಂಟಪ ಪ್ರಶಸ್ತಿ’ ಪ್ರದಾನ ಮಾಡಲಾಯಿತು.
ಪ್ರಶಸ್ತಿಗಳು ಕ್ರಮವಾಗಿ ₹50 ಸಾವಿರ, ₹1 ಲಕ್ಷ ನಗದು ಹಾಗೂ ಫಲಕಗಳನ್ನು ಒಳಗೊಂಡಿವೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಪ್ರಶಸ್ತಿ ಪ್ರದಾನ ಮಾಡಿದರು. ಶಾಸಕ ಶರಣು ಸಲಗರ, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಬಸವಲಿಂಗ ಪಟ್ಟದ್ದೇವರು, ನಿಜಗುಣಾನಂದ ಸ್ವಾಮೀಜಿ, ಸಿದ್ದರಾಮೇಶ್ವರ ಸ್ವಾಮೀಜಿ, ಅಕ್ಕ ಅನ್ನಪೂರ್ಣ, ಆನಂದ ದೇವಪ್ಪ ಹಾಗೂ ಬಸವರಾಜ ಧನ್ನೂರ, ಗುರುಬಸವ ಪಟ್ಟದ್ದೇವರು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.