ADVERTISEMENT

ಭಾಲ್ಕಿಯಲ್ಲಿ ಸೈಕಲ್ ಜಾಥಾ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2022, 2:53 IST
Last Updated 5 ಆಗಸ್ಟ್ 2022, 2:53 IST
ಭಾಲ್ಕಿಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಗುರುವಾರ ನಡೆದ ಸೈಕಲ್ ಜಾಥಾ
ಭಾಲ್ಕಿಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಗುರುವಾರ ನಡೆದ ಸೈಕಲ್ ಜಾಥಾ   

ಭಾಲ್ಕಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಗುರುವಾರ ಸೈಕಲ್ ಜಾಥಾ ನಡೆಯಿತು.

ಪುರಸಭೆ ಕಚೇರಿ ಆವರಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ನಡೆದ ಜಾಥಾಗೆ ತಹಶೀಲ್ದಾರ್ ಕೀರ್ತಿ ಚಾಲಕ್ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಅಮೃತ ಮಹೋತ್ಸವವನ್ನು ದೇಶದಲ್ಲಿ ಹಬ್ಬದ ರೀತಿಯಲ್ಲಿ ಆಚರಿಸಲಾಗುತ್ತಿದೆ. ಶುಕ್ರವಾರ ರಾಷ್ಟ್ರಧ್ವಜ ಪಥ ಸಂಚಲನ ನಡೆಯಲಿದೆ ಎಂದರು.

ADVERTISEMENT

ಡಿವೈಎಸ್ಪಿ ಪ್ರಥ್ವಿಕ್ ಶಂಕರ ಮಾತನಾಡಿದರು. ಜಾಥಾ ಬೊಮ್ಮಗೊಂಡೇಶ್ವರ ವೃತ್ತದಿಂದ ಜ್ಯೋತಿಬಾ ಫುಲೆ ವೃತ್ತ, ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತದಿಂದ ಪುರಭವನದ ತಲುಪಿತು. ದೇಶಭಕ್ತಿಯ ಜಯಘೋಷ ಮೊಳಗಿದವು. ಖಾಸಗಿ ಮತ್ತು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದರು. ಬಾಳೆಹಣ್ಣು, ಕುಡಿವ ನೀರಿನ ವ್ಯವಸ್ಥೆ ಮಾಡಲಾಗಿತ್ತು.

ಪುರಸಭೆ ಅಧ್ಯಕ್ಷ ಅನಿಲ್ ಸುಂಟೆ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶ ಸತೀಶ್ ಸಂಗನ, ಬಿಸಿಎಂ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ವಗ್ಗೆ, ಪುರಸಭೆ ಮುಖ್ಯಾಧಿಕಾರಿ ಸ್ವಾಮಿದಾಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.