ADVERTISEMENT

ಬೀದರ್ | ₹1.25 ಕೋಟಿ ದುರ್ಬಳಕೆ: ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2025, 23:30 IST
Last Updated 24 ಡಿಸೆಂಬರ್ 2025, 23:30 IST
   

ಹುಮನಾಬಾದ್: ಪಟ್ಟಣದ ಎಸ್‌ಬಿಐ ಖಾತೆಯಿಂದ ₹1.25 ಕೋಟಿ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಮೇರೆಗೆ ಬೀದರ್ ಪ್ರಾದೇಶಿಕ ಕಚೇರಿಯ ಎಟಿಎಂ ಚಾನೆಲ್ ಮ್ಯಾನೇಜರ್ ಪ್ರವೀಣ ಕುಮಾರ್‌ ವಿರುದ್ಧ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.

‘ಹುಮನಾಬಾದ್ ಪಟ್ಟಣದ ಎಸ್‌ಬಿಐ ಶಾಖೆಯ ಪ್ರಭಾರ ವಹಿಸಿಕೊಂಡಾಗ ಬ್ಯಾಂಕ್‌ ಖಾತೆಯಿಂದ ₹1.25 ಕೋಟಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬ್ಯಾಂಕ್ ವ್ಯವಸ್ಥಾಪಕ ರಘುನಾಥ ಕೆ.ಎಲ್.
ದೂರು ನೀಡಿದ್ದರು. ತನಿಖೆ ನಡೆಸಲಾಗುತ್ತಿದೆ’ ಎಂದು ಪಿಎಸ್ಐ ಸುರೇಶ್ ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT