ADVERTISEMENT

ಕೇಂದ್ರ ಸರ್ಕಾರದ ವಿರುದ್ಧ ಎಲ್‌ಐಸಿ, ಬ್ಯಾಂಕ್‌ ನೌಕರರ ಮುಷ್ಕರ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2026, 7:49 IST
Last Updated 14 ಫೆಬ್ರುವರಿ 2026, 7:49 IST
ಖಾಸಗೀಕರಣ ನೀತಿ ಕೈಬಿಡಬೇಕೆಂದು ಆಗ್ರಹಿಸಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಮತ್ತು ನೌಕರರ ಸಂಘ, ಆಲ್ ಇಂಡಿಯಾ ಬ್ಯಾಂಕರ್ಸ್ ಅಸೋಸಿಯೇಶನ್ ಹಾಗೂ ಎಲ್‌ಐಸಿ ನೌಕರರು ಬೀದರ್‌ನಲ್ಲಿ ಶುಕ್ರವಾರ ಮುಷ್ಕರ ನಡೆಸಿದರು
ಖಾಸಗೀಕರಣ ನೀತಿ ಕೈಬಿಡಬೇಕೆಂದು ಆಗ್ರಹಿಸಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಮತ್ತು ನೌಕರರ ಸಂಘ, ಆಲ್ ಇಂಡಿಯಾ ಬ್ಯಾಂಕರ್ಸ್ ಅಸೋಸಿಯೇಶನ್ ಹಾಗೂ ಎಲ್‌ಐಸಿ ನೌಕರರು ಬೀದರ್‌ನಲ್ಲಿ ಶುಕ್ರವಾರ ಮುಷ್ಕರ ನಡೆಸಿದರು   

ಬೀದರ್‌: ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು. ಖಾಸಗೀಕರಣ ನೀತಿ ಕೈಬಿಡಬೇಕೆಂದು ಆಗ್ರಹಿಸಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಮತ್ತು ನೌಕರರ ಸಂಘ, ಆಲ್ ಇಂಡಿಯಾ ಬ್ಯಾಂಕರ್ಸ್ ಅಸೋಸಿಯೇಶನ್ ಹಾಗೂ ಎಲ್‌ಐಸಿ ನೌಕರರು ನಗರದಲ್ಲಿ ಶುಕ್ರವಾರ ಮುಷ್ಕರ ನಡೆಸಿದರು.

ವಿದ್ಯುತ್ ಮಸೂದೆ ಹಿಂಪಡೆಯಬೇಕು. ವಿಕಸಿತ ಭಾರತ ಉದ್ಯೋಗ ಕಾಯ್ದೆ ರದ್ದುಪಡಿಸಬೇಕು. ಇನ್‌ಶುರೆನ್ಸ್‌ ಕ್ಷೇತ್ರದಲ್ಲಿ ಶೇ 100ರಷ್ಟು ಎಫ್‌ಡಿಐ ವಾಪಸ್ ಪಡೆಯಬೇಕು. ಶಿಕ್ಷಣ ಮಸೂದೆ ಹಿಂಪಡೆದು, ಖಾಲಿ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕು. ಅಂಗನವಾಡಿ, ಆಶಾ, ಎಂಡಿಎ ಹಾಗೂ ಎನ್‌ಎಚ್‌ಎಂ ಸಿಬ್ಬಂದಿಯನ್ನು ಶಾಶ್ವತಗೊಳಿಸಬೇಕು ಇಲ್ಲವಾದಲ್ಲಿ ಬರುವ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇನ್‌ಶುರೆನ್ಸ್ ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ಮಲ್ಲೇಶ, ಪ್ರಧಾನ ಕಾರ್ಯದರ್ಶಿ ರಾಜಶೇಖರ್‌, ಖಜಾಂಚಿ ವಿಜಯಕುಮಾರ್‌, ಮಾಜಿ ಅಧ್ಯಕ್ಷ ಬಸವರಾಜ ಮಾಳಗೆ, ಶಿವಲಿಂಗಪ್ಪ, ಸತೀಶ್‌ ನಾಟೇಕರ್, ಮಹಾಲಕ್ಷ್ಮೀ, ವಿಜಯಲಕ್ಷ್ಮೀ,  ಕರ್ಣಾಟಕ ಗ್ರಾಮೀಣ ಬ್ಯಾಂಕ್ ಕಾರ್ಯಾಧ್ಯಕ್ಷ ಸಿದ್ದಣ್ಣ ಎಚ್. ಮಂದರವಾಡಕರ್, ಪ್ರಾದೇಶಿಕ ಅಧ್ಯಕ್ಷ ಸಂತೋಷ್ ಹಿರೇಮಠ, ಸಹಾಯಕ ಪ್ರಧಾನ ಕಾರ್ಯದರ್ಶಿ ಸಚಿನ್ ಸೋಶೆಟ್ಟಿ, ಪ್ರತಿನಿಧಿ ಸಂತೋಷ್ ಬಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಹಾವಗಿ ಸ್ವಾಮಿ, ಮಂಜುನಾಥ್ ಭಾಗವತ್, ಕಲಬುರಗಿ ಪ್ರತಿನಿಧಿ ವೇಣುಗೋಪಾಲ್, ಕೆನರಾ ಬ್ಯಾಂಕಿನ ನಿವೃತ್ತ ಅಧಿಕಾರಿ ಶಿವಾಜಿರಾವ್‌ ಮಾನೆ  ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.