ADVERTISEMENT

ಶಾಸಕ ಬಿ. ನಾರಾಯಣರಾವ್‌ ಅಂತ್ಯಕ್ರಿಯೆ ಪ್ರಕ್ರಿಯೆ ಆರಂಭ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 7:15 IST
Last Updated 25 ಸೆಪ್ಟೆಂಬರ್ 2020, 7:15 IST
ಬಿ.ನಾರಾಯಣರಾವ್‌
ಬಿ.ನಾರಾಯಣರಾವ್‌   

ಬೀದರ್‌: ಶಾಸಕ ಬಿ.ನಾರಾಯಣರಾವ್‌ ಪಾರ್ಥಿವ ಶರೀರ ಬಸವಕಲ್ಯಾಣಕ್ಕೆ ಬಂದಿದೆ. ಮುಡಬಿ ಕ್ರಾಸ್‌ನಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯ ಜಾಗೃತಿ ಆಶ್ರಮ ಸಮೀಪದ ಅಟೋನಗರದಲ್ಲಿ ಶಾಸಕ ಬಿ.ನಾರಾಯಣರಾವ್ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿದೆ.

ನಾರಾಯಣರಾವ್‌ ಪತ್ನಿ ಮಲ್ಲಮ್ಮ, ಪುತ‌್ರರಾದ ಗೌತಮ, ರಾಹುಲ್, ಜಿಲ್ಲಾಧಿಕಾರಿ ರಾಮಚಂದ್ರನ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಎಲ್‌.ನಾಗೇಶ, ಬಸವಕಲ್ಯಾಣ ತಹಶೀಲ್ದಾರ್ ಸಾವಿತ್ರಿ ಸಲಗರ ಸ್ಥಳದಲ್ಲಿದ್ದಾರೆ. ಅಂತ್ಯಸಂಸ್ಕಾರ ನಡೆಯುವ ಸ್ಥಳದ ಸಮೀಪ ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದು, ಪೊಲೀಸ್ ಬಿಗಿ ಬಂದೋಬಸ್ತ ಮಾಡಲಾಗಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ರಾಜಶೇಖರ ಪಾಟೀಲ, ಬಂಡೆಪ್ಪ ಕಾಶೆಂಪುರ, ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್, ಡಾ.ಚಂದ್ರಶೇಖರ ಪಾಟೀಲ, ಕಲಬುರ್ಗಿ ಸಂಸದ ಡಾ.ಉಮೇಶ ಜಾಧವ, ಮಾಜಿ ಶಾಸಕ‌ ಮಲ್ಲಿಕಾರ್ಜುನ ಖೂಬಾ, ಹಾರಕೂಡ ಚನ್ನವೀರ ಶಿವಾಚಾರ್ಯರು ಹಾಜರಿದ್ದಾರೆ.

ADVERTISEMENT

ಹೈದರಾಬಾದ್‌–ಸೋಲಾಪುರ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಅಲ್ಲಲ್ಲಿ ಗುಂಪುಗುಂಪಾಗಿ ಸಾವಿರಾರು ಜನರು ನೆರೆದಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.