ADVERTISEMENT

ಬಸವಕಲ್ಯಾಣ: ಕೆಪಿಸಿಸಿ ಸಹಕಾರ ವಿಭಾಗಕ್ಕೆ ತಾಳಂಪಳ್ಳಿ ನೇಮಕ

​ಪ್ರಜಾವಾಣಿ ವಾರ್ತೆ
Published 2 ಜೂನ್ 2025, 14:29 IST
Last Updated 2 ಜೂನ್ 2025, 14:29 IST
ಧನರಾಜ ತಾಳಂಪಳ್ಳಿ
ಧನರಾಜ ತಾಳಂಪಳ್ಳಿ   

ಬಸವಕಲ್ಯಾಣ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಹಕಾರ ವಿಭಾಗದ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನಗರದ ಕಾಂಗ್ರೆಸ್ ಮುಖಂಡ ಧನರಾಜ ತಾಳಂಪಳ್ಳಿ ಅವರನ್ನು ನೇಮಿಸಲಾಗಿದೆ.

ಕೆಪಿಸಿಸಿ ರಾಜ್ಯ ಘಟಕದ ಅಧ್ಯಕ್ಷ ಡಿ.ಕೆ. ಶಿವಕುಮಾರ ಪ್ರಕಟಣೆಯ ಮೂಲಕ ಈ ವಿಷಯ ತಿಳಿಸಿದ್ದಾರೆ. ಪಕ್ಷದ ಈ ಮಹತ್ವದ ಜವಾಬ್ದಾರಿ ವಹಿಸಿಕೊಂಡು ರಾಜ್ಯ ಮಟ್ಟದ ನಾಯಕರ ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ಸಹಕಾರ ವಿಭಾಗದ ಸಂಘಟನೆ ಬಲಗೊಳಿಸಬೇಕು. ಪಕ್ಷದ ಬಲವರ್ಧನೆ ನಿಟ್ಟಿನಲ್ಲಿ ಈಗಿನಿಂದಲೇ ಕಾರ್ಯೋನ್ಮುಖರಾಗಬೇಕು ಎಂದು ಸೂಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT