ADVERTISEMENT

ಫಲಾನುಭವಿಗಳ ಆಯ್ಕೆ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2020, 16:03 IST
Last Updated 9 ನವೆಂಬರ್ 2020, 16:03 IST
ಬೀದರ್‌ನಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಅಧ್ಯಕ್ಷತೆಯಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳ ಆಯ್ಕೆ ಸಮಿತಿ ಸಭೆ ನಡೆಯಿತು
ಬೀದರ್‌ನಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಅಧ್ಯಕ್ಷತೆಯಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳ ಆಯ್ಕೆ ಸಮಿತಿ ಸಭೆ ನಡೆಯಿತು   

ಬೀದರ್: ವಿವಿಧ ನಿಗಮಗಳ ಪ್ರಸಕ್ತ ಸಾಲಿನ ಯೋಜನೆಗಳ ಫಲಾನುಭವಿಗಳ ಆಯ್ಕೆಯ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯಿತು.

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಮಡಿವಾಳ ಮಾಚಿದೇವಾ ಅಭಿವೃದ್ಧಿ ನಿಗಮಗಳ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.

2019-20ನೇ ಸಾಲಿನ ವಿವಿಧ ಯೋಜನೆಗಳಲ್ಲಿ ಸೌಲಭ್ಯ ಪಡೆದ ಫಲಾನುಭವಿಗಳೊಂದಿಗೆ ಈ ಸಂದರ್ಭದಲ್ಲಿ ಸಂವಾದ ನಡೆಸಲಾಯಿತು.

ADVERTISEMENT

ಸಭೆಯಲ್ಲಿ ಲೀಡ್‌ ಬ್ಯಾಂಕ್ ಮ್ಯಾನೇಜರ್ ಬಿ.ಎಂ. ಕಮತಗಿ, ಜಿಲ್ಲಾ ಕೈಗಾರಿಕೆ ಕೇಂದ್ರದ ಸುರೇಖಾ ಮನೋಳಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ನಿಗಮಗಳ ಜಿಲ್ಲಾ ವ್ಯವಸ್ಥಾಪಕ ಶೇಖರಬಾಬು ಬೆನೂರ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.