ಬೀದರ್: ಐಪಿಎಲ್ ಕ್ರಿಕೆಟ್ ಟೂರ್ನಮೆಂಟ್ನಲ್ಲಿ ಕಿಂಗ್ ಎಲೆವನ್ ಪಂಜಾಬ ಮತ್ತು ರಾಜಸ್ಥಾನ ರಾಯಲ್ಸ್ಗಳ ಮಧ್ಯೆ ಪಂದ್ಯ ನಡೆದಿದ್ದ ಕಾಲಕ್ಕೆ ಹುಮನಾಬಾದ್ನ ಜೋಶಿ ಗಲ್ಲಿಯಲ್ಲಿ ಭಾನುವಾರ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಸ್ಥಳದಲ್ಲಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ತೆಗೆದುಕೊಂಡು ₹ 1.90 ಲಕ್ಷ ವಶಪಡಿಸಿಕೊಂಡಿದ್ದಾರೆ.
ಚಿಟಗುಪ್ಪ ಸಿಪಿಐ ಶರಣಬಸವೇಶ್ವರ ಭಜಂತ್ರಿ ನೇತೃತ್ವದಲ್ಲಿ ಹುಮಾನಾಬಾದ್ ಪೊಲೀಸ್ ಠಾಣೆಯ ಪಿಎಸ್ಐ ರವಿಕುಮಾರ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳಾದ ಮಹೇಶ ಲಕ್ಷ್ಮಣ ಹಣಕುಣಿ ಹಾಗೂ ಓಂಪ್ರಕಾಶ ಮಾಣಿಕರಾವ್ ಪೋಳಾ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಹುಮನಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.