
ಭಾಲ್ಕಿ: ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪಿಯು ಕಾಲೇಜಿನಲ್ಲಿ ಭಾನುವಾರ ನಡೆದ ಗುರುಕುಲ ಗೋಲ್ಡನ್ ಸ್ಕಾಲರ್ಶಿಪ್ ಪ್ರವೇಶ ಪರೀಕ್ಷೆಗೆ 1959 ವಿದ್ಯಾರ್ಥಿಗಳು ಹಾಜರಾಗಿದ್ದರು.
ರಾಜ್ಯದ ಸುಮಾರು 25 ಜಿಲ್ಲೆಗಳು ಸೇರಿ ನೆರೆಯ ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಲ್ಲಿ ಪ್ರಸ್ತುತ ಸಾಲಿನಲ್ಲಿ ಎಸ್ಎಸ್ಎಲ್ಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ಬರುವ ಜ.18 ಮತ್ತು 25 ರಂದು ಇನ್ನು ಎರಡು ಹಂತದ ಪರೀಕ್ಷೆ ನಡೆಯಲಿವೆ. ಪರೀಕ್ಷೆಯಲ್ಲಿ ಮೊದಲ 25 ರ್ಯಾಂಕ್ ಪಡೆಯುವ ವಿದ್ಯಾರ್ಥಿಗಳಿಗೆ ಎರಡು ವರ್ಷ ಉಚಿತ ಪಿಯುಸಿ ಶಿಕ್ಷಣ, ಪ್ರಸಾದ, ವಸತಿ ಮತ್ತು ಕೋಚಿಂಗ್ ಸೌಲಭ್ಯ ಸಿಗಲಿದೆ. ನಂತರದ 75 ರ್ಯಾಂಕ್ ಪಡೆಯುವ ವಿದ್ಯಾರ್ಥಿಗಳಿಗೆ ಫೀ ನಲ್ಲಿ ಶೇ.50ರಷ್ಟು ರಿಯಾಯಿತಿ ಸಿಗಲಿದೆ ಎಂದು ಪ್ರಾಚಾರ್ಯ ಬಸವರಾಜ ಮೊಳಕೀರೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.