
ಪ್ರಜಾವಾಣಿ ವಾರ್ತೆ
ಈಶ್ವರ ಖಂಡ್ರೆ
ಭಾಲ್ಕಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷ, ಸಚಿವ ಈಶ್ವರ ಖಂಡ್ರೆ ಹಾಗೂ ಯುಎಸ್ಎ ನ ಏಷ್ಯಾ ಇಂಟರನ್ಯಾಷನಲ್ ಕಲ್ಚರಲ್ ರಿಸರ್ಚ್ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪುರಸ್ಕೃತ ಹಾವಗಿಲಿಂಗೇಶ್ವರ ಶಿವಾಚಾರ್ಯರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ತಾಲ್ಲೂಕಿನ ಹಲಬರ್ಗಾ ಗ್ರಾಮದ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ ಫೆ.15 ರಂದು ಬೆಳಿಗ್ಗೆ 11.30ಕ್ಕೆ ಸಮಾರಂಭ ಜರುಗಲಿದೆ. ಗ್ರಾಮಸ್ಥರ ವತಿಯಿಂದ ಸಮಾರಂಭ ಸಂಘಟಿಸಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ರಾಚೋಟೇಶ್ವರ ಸಂಸ್ಥಾನ ಮಠ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.