ADVERTISEMENT

ಚರ್ಚಾ ಸ್ಪರ್ಧೆ: ಹಾವಗೇಶ ರಾಜ್ಯಮಟ್ಟಕ್ಕೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2024, 13:51 IST
Last Updated 3 ಜನವರಿ 2024, 13:51 IST
<div class="paragraphs"><p>ಹಾವಗೇಶ ಬಸವಲಿಂಗಪ್ಪ</p></div>

ಹಾವಗೇಶ ಬಸವಲಿಂಗಪ್ಪ

   

ಭಾಲ್ಕಿ: ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ವಸತಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಹಾವಗೇಶ ಬಸವಲಿಂಗಪ್ಪ ಬುಧವಾರ ಬೀದರ್‌ನಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು, ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಆಡಳಿತಾಧಿಕಾರಿ ಮೋಹನರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಮುಖ್ಯಶಿಕ್ಷಕ ಮಹೇಶ ಮಹಾರಾಜ್, ಎಸ್ಸೆಸ್ಸೆಲ್ಸಿ ಸಂಯೋಜಕ ಪ್ರವೀಣ ಖಂಡಾಳೆ ಸಂತಸ ವ್ಯಕ್ತಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.