ADVERTISEMENT

ಭವಾನಿ ಮಾತೆ ಜಾತ್ರೆ 16 ರಿಂದ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 8:08 IST
Last Updated 12 ಏಪ್ರಿಲ್ 2022, 8:08 IST
ಔರಾದ್ ತಾಲ್ಲೂಕಿನ ತುಳಜಾಪುರ ಗ್ರಾಮದ ಭವಾನಿ ಮಾತೆ ಮಂದಿರ
ಔರಾದ್ ತಾಲ್ಲೂಕಿನ ತುಳಜಾಪುರ ಗ್ರಾಮದ ಭವಾನಿ ಮಾತೆ ಮಂದಿರ   

ಬೀದರ್: ಔರಾದ್ ತಾಲ್ಲೂಕಿನ ತುಳಜಾಪುರದಲ್ಲಿ ಭವಾನಿ ಮಾತೆ ಜಾತ್ರಾ ಮಹೋತ್ಸವ ಏಪ್ರಿಲ್ 16 ಹಾಗೂ 17 ರಂದು ನಡೆಯಲಿದೆ.

ಜಾತ್ರೆ ನಿಮಿತ್ತ ಗ್ರಾಮದ ಭವಾನಿ ಮಾತೆ ಮಂದಿರದಲ್ಲಿ ವಿಶೇಷ ಪೂಜೆ, ಮಹಾ ಅಭಿಷೇಕ, ಪ್ರಸಾದ ವಿತರಣೆ, ಪಲ್ಲಕ್ಕಿ ಮೆರವಣಿಗೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

16 ರಂದು ಬೆಳಿಗ್ಗೆ 7ಕ್ಕೆ ಮಹಾ ಅಭಿಷೇಕ, ಬೆಳಿಗ್ಗೆ 9 ರಿಂದ ಪ್ರಸಾದ ವಿತರಣೆ, ಸಂಜೆ 7ಕ್ಕೆ ಪಲ್ಲಕ್ಕಿ ಮೆರವಣಿಗೆ ಜರುಗಲಿದೆ.
ಭವಾನಿ ಮಾತೆ ಜಾತ್ರೆಯು ಸರ್ವ ಧರ್ಮ ಸಮನ್ವಯಕ್ಕೆ ಹೆಸರಾಗಿದೆ. ಗ್ರಾಮ, ಸುತ್ತಮುತ್ತಲಿನ ಗ್ರಾಮಗಳು ಸೇರಿದಂತೆ ವಿವಿಧೆಡೆಯ ಸರ್ವ ಧರ್ಮಗಳ ಭಕ್ತರು ಜಾತ್ರೆಗೆ ಬಂದು ಭವಾನಿ ಮಾತೆಗೆ ಪೂಜೆ ಸಲ್ಲಿಸುತ್ತಾರೆ. ಉದ್ಯೋಗ ಹಾಗೂ ಇತರ ಕಾರಣಗಳಿಂದಾಗಿ ಬೇರೆ ಊರು, ಪಟ್ಟಣ, ನಗರಗಳಲ್ಲಿ ನೆಲೆಸಿರುವ ಗ್ರಾಮದ ಜನ ತಪ್ಪದೇ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ.

ADVERTISEMENT

ಭವಾನಿ ಮಾತೆ ಜಾತ್ರೆಗೆ ಭರದ ಸಿದ್ಧತೆಗಳು ನಡೆದಿವೆ. ಜಾತ್ರೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಗ್ರಾಮದ ಆರಿಫ್ ಮುಲ್ಲಾ, ಹಿರಿಯ ಮುಖಂಡರಾದ ಅರವಿಂದ ಪಾರಾ, ಸುಭಾಷ ಪೊಲೀಸ್ ಪಾಟೀಲ, ತಿಪ್ಪೇಶ ವಲ್ಲಾಪುರೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.