ADVERTISEMENT

ಭೀಮಣ್ಣ ಖಂಡ್ರೆ ಆರೋಗ್ಯ ಸ್ಥಿರ: ವದಂತಿಗಳಿಗೆ ಕಿವಿ ಕೊಡದಿರಲು ಈಶ್ವರ ಖಂಡ್ರೆ ಮನವಿ

​ಪ್ರಜಾವಾಣಿ ವಾರ್ತೆ
Published 13 ಜನವರಿ 2026, 6:20 IST
Last Updated 13 ಜನವರಿ 2026, 6:20 IST
   

ಭಾಲ್ಕಿ: ಮಾಜಿಸಚಿವ ಭೀಮಣ್ಣ ಖಂಡ್ರೆ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಮನವಿ ಮಾಡಿದ್ದಾರೆ.

ಕಳೆದ ಒಂದು ವಾರದಿಂದ ವಯೋಸಹಜ ಕಾಯಿಲೆ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೀದರ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಮನೆಯಲ್ಲಿಯೇ ಅವರಿಗೆ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಪ್ರಜಾವಾಣಿಗೆ ಮಂಗಳವಾರ ತಿಳಿಸಿದ್ದಾರೆ.

ಕೆಲವರು ಸಾಮಾಜಿಕ ತಾಣಗಳಲ್ಲಿ ತಮ್ಮ ಪೂಜ್ಯ ತಂದೆಯವರ ಕುರಿತಂತೆ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದು, ಯಾರೂ ವದಂತಿಗಳಿಗೆ ಕಿವಿಗೊಡಬಾರದು. ತಮ್ಮ ತಂದೆಯವರ ಆರೋಗ್ಯ ಸುಧಾರಣೆಗಾಗಿ ಪ್ರಾರ್ಥಿಸಬೇಕು ಎಂದು ಮನವಿ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.