ಬೀದರ್: ಹೈಕೋರ್ಟ್ನಲ್ಲಿ ಅಕ್ಟೋಬರ್ನಲ್ಲಿ ನಡೆಯಲಿರುವ ವಿಚಾರಣೆ ನಂತರ ಬೀದರ್-ಔರಾದ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಕ್ರಿಯೆ ಪುನರಾರಂಭ ಆಗಲಿದೆ ಎಂದು ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.
₹ 335 ಕೋಟಿ ವೆಚ್ಚದಲ್ಲಿ 52 ಕಿ.ಮೀ. ಉದ್ದದ ಹೆದ್ದಾರಿಗೆ ಮಂಜೂರಾತಿ ದೊರೆತಿದೆ. ಹೆದ್ದಾರಿ ಟೆಂಡರ್ ಪ್ರಕ್ರಿಯೆ ಜುಲೈ 1ಕ್ಕೆ ಪೂರ್ಣಗೊಂಡು ಅರ್ಹ ಕಂಪನಿಗೆ ಕಾಮಗಾರಿ ಸಿಗಬೇಕಿತ್ತು. ಆದರೆ, ತಾಂತ್ರಿಕ ಕಾರಣಗಳಿಂದ ಟೆಂಡರ್ ಪ್ರಕ್ರಿಯೆಯಿಂದ ಹೊರಗಿಡಲಾಗಿದ್ದ ಹೈದರಾಬಾದ್ನ ಟ್ರ್ಯಾಕ್ ಆ್ಯಂಡ್ ಟವರ್ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದು, ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಅಕ್ಟೋಬರ್ನಲ್ಲಿ ವಿಚಾರಣೆಗೆ ಹಾಜರಾಗುವಂತೆ ಕಂಪನಿಗೆ ಸೂಚಿಸಿದೆ ಎಂದು ಹೇಳಿದ್ದಾರೆ.
ಕೋವಿಡ್ ಪ್ರಯುಕ್ತ ನ್ಯಾಯಾಲಯಗಳು ಸಹ ಬಂದ್ ಆಗಿದ್ದ ಕಾರಣ ಪ್ರಕರಣ ಸಮಯ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.