ADVERTISEMENT

ಬೀದರ್ - ಬೆಂಗಳೂರು ನಾಗರಿಕ ವಿಮಾನಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2025, 12:56 IST
Last Updated 16 ಏಪ್ರಿಲ್ 2025, 12:56 IST
<div class="paragraphs"><p>ಬೀದರ್ - ಬೆಂಗಳೂರು ನಾಗರಿಕ ವಿಮಾನಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ</p></div>

ಬೀದರ್ - ಬೆಂಗಳೂರು ನಾಗರಿಕ ವಿಮಾನಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

   

ಬೀದರ್: ಒಂದುವರೆ ವರ್ಷದ ಹಿಂದೆ ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ನಾಗರಿಕ ವಿಮಾನಯಾನ ಸೇವೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಗರದ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಜೆ ಕೇಕ್ ಕತ್ತರಿಸಿ ಚಾಲನೆ ನೀಡಿದರು.

ಏ. 17ರಂದು ಬೀದರ್ ನಿಂದ ಬೆಂಗಳೂರಿಗೆ ಪಯಣ ಬೆಳೆಸಲಿರುವ ಐದು ಜನರಿಗೆ ಬೋರ್ಡಿಂಗ್ ಪಾಸ್ ವಿತರಿಸಿ, ವಿದ್ಯುಕ್ತವಾಗಿ ಹಸಿರು ನಿಶಾನೆ ತೋರಿದರು.

ADVERTISEMENT

ಸ್ಟಾರ್ ಏರ್ ವಿಮಾನವು ಪ್ರತಿದಿನ ಬೆಳಿಗ್ಗೆ 7.30ಕ್ಕೆ ಬೆಂಗಳೂರಿನಿಂದ ಹೊರಟು, ಬೆಳಿಗ್ಗೆ 8.45ಕ್ಕೆ ಬೀದರ್ ತಲುಪಲಿದೆ. ಅದೇ ದಿನ ಬೆಳಿಗ್ಗೆ 9.10ಕ್ಕೆ ಬೀದರ್ ನಿಂದ ಹೊರಟು ಬೆಳಿಗ್ಗೆ 10.25ಕ್ಕೆ ಬೆಂಗಳೂರು ಸೇರಲಿದೆ.

ಈಶ್ವರ ಬಿ. ಖಂಡ್ರೆ ಮಾತನಾಡಿ, ಕೇಂದ್ರ ಸಹಾಯ ಧನ ಸ್ಥಗಿತಗೊಳಿಸಿತ್ತು. ಡಬಲ್ ಎಂಜಿ‌ನ್ ಸರ್ಕಾರ ಇದ್ದರೂ ಏನೂ ಮಾಡಿರಲಿಲ್ಲ. ನಮ್ಮ ಸರ್ಕಾರ ವಿಮಾನಯಾನ ಸೇವೆ ಆರಂಭಿಸಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ₹14 ಕೋಟಿ ಮೀಸಲಿಡಲಾಗಿದೆ ಎಂದರು. ಮುಖ್ಯಮಂತ್ರಿ ಸೇರಿದಂತೆ ಬೇರೆ ಯಾರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿಲ್ಲ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಸಚಿವರಾದ ಈಶ್ವರ ಬಿ. ಖಂಡ್ರೆ,‌ ರಹೀಂ ಖಾನ್, ಎಂ.ಸಿ. ಸುಧಾಕರ್ , ರಾಮಲಿಂಗಾರೆಡ್ಡಿ, ಸಂಸದ ಸಾಗರ್ ಖಂಡ್ರೆ, ವಿಧಾನ ಪರಿಷತ್ ಸದಸ್ಯರಾದ ಚಂದ್ರಶೇಖರ ಪಾಟೀಲ, ಭೀಮರಾವ್ ಪಾಟೀಲ,

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಬುಡಾ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ನಗರಸಭೆ ಅಧ್ಯಕ್ಷ ಮುಹಮ್ಮದ್ ಗೌಸ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.