ಸಾಂದರ್ಭಿಕ ಚಿತ್ರ
– ಎ.ಐ ಚಿತ್ರ
ಭಾಲ್ಕಿ (ಬೀದರ್ ಜಿಲ್ಲೆ): ತಾಲ್ಲೂಕಿನ ಮರೂರ ಗ್ರಾಮ ಸಮೀಪದ ಕಾರಂಜಾ ಜಲಾಶಯದ ಕಾಲುವೆಗೆ ಒಂದೇ ಕುಟುಂಬದ ನಾಲ್ವರು ಜಿಗಿದು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದರಲ್ಲಿ ಇಬ್ಬರು ಅದೃಷ್ಟವಶಾತ್ ಬದುಕುಳಿದಿದ್ದಾರೆ.
ಬೀದರ್ ನ ಮೈಲೂರಿನವರಾದ ಶಿವಮೂರ್ತಿ ಮಾರುತಿ ಬ್ಯಾನರ್ಜಿ (45) ಅವರ ಮೂವರು ಮಕ್ಕಳಾದ ಶ್ರೀಶಾಂತ (9), ರಿತಿಕ್ (7), ಏಳು ತಿಂಗಳ ರಾಕೇಶ ಮೃತರು.
ಘಟನೆಯಲ್ಲಿ ಶಿವಮೂರ್ತಿ ಅವರ ಪತ್ನಿ ರಮಾಬಾಯಿ, ಮಗ ಶ್ರೀಕಾಂತ ಬದುಕುಳಿದಿದ್ದಾರೆ. ಸಾಲಬಾಧೆ ಆತ್ಮಹತ್ಯೆಗೆ ಕಾರಣ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಧನ್ನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಭೇಟಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.