ಬೀದರ್: ಮಹಮೂದ್ ಗವಾನ್ ಮದರಸಾದಲ್ಲಿ ಭವಾನಿದೇವಿ ಮೆರವಣಿಗೆಯಲ್ಲಿದ್ದ ಭಕ್ತರು ಪೂಜೆ ಸಲ್ಲಿಸಿದ್ದರಿಂದ ಉಂಟಾಗಿದ್ದ ಬಿಗುವಿನ ವಾತಾವರಣ ತಿಳಿಗೊಂಡಿದೆ. ಓಲ್ಡ್ಸಿಟಿ ಸಹಜ ಸ್ಥಿತಿಗೆ ಮರಳಿದ್ದು, ಪೊಲೀಸ್ ಬಂದೋಬಸ್ತ್ ಹಿಂಪಡೆಯಲಾಗಿದೆ.
ಮುಸ್ಲಿಂ ಹಾಗೂ ಹಿಂದೂ ಸಂಘಟನೆಗಳ ಪ್ರಮುಖರು ಪ್ರತ್ಯೇಕವಾಗಿ ಶಾಂತಿ ಸಭೆ ನಡೆಸಿ ಶಾಂತಿ ಸೌಹರ್ದ ಕಾಪಾಡುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ಓಲ್ಡ್ಸಿಟಿಯಲ್ಲಿ ವ್ಯಾಪಾರ ವಹಿವಾಟುಗಳು ಶನಿವಾರ ಎಂದಿನಂತೆ ನಡೆದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.