ಬೀದರ್: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ವಿಶ್ವ ಬೈಸಿಕಲ್ ದಿನಾಚರಣೆ ಅಂಗವಾಗಿ ಬೊಜ್ಜಿನ ವಿರುದ್ಧ ಸೈಕ್ಲಿಂಗ್ ಅಭಿಯಾನಕ್ಕೆ ನಗರದಲ್ಲಿ ಸೋಮವಾರ ಚಾಲನೆ ನೀಡಲಾಯಿತು.
ಈ ಅಭಿಯಾನವು ಸೈಕ್ಲಿಂಗ್ ಅನ್ನು ಸುಸ್ಥಿರ, ಅಂತರ್ಗತ ಮತ್ತು ಪರಿಸರ ಸ್ನೇಹಿ ಭಾಗವಾಗಿ ಹಲವಾರು ಆರೋಗ್ಯ ಪ್ರಯೋಜನಗಳೊಂದಿಗೆ ಉತ್ತೇಜಿಸುವ ಗುರಿ ಹೊಂದಿದೆ.
ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೇರಾ ಯುವ ಭಾರತ್ ಹಾಗೂ ಜಿಲ್ಲಾ ಬೈಸಿಕಲ್ ಸಂಘಗಳ ಸಹಯೋಗದಲ್ಲಿ ಏರ್ಪಡಿಸಿದ್ದ ಅಭಿಯಾನಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ ಚಾಲನೆ ನೀಡಿದರು.
ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ್ ಮಠ, ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರ್ಮೆ, ಎಂ.ವೈ. ಭರತ್, ವಿನೋದ್ ಸಿನ್ಹಾ ಮತ್ತಿತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.