ADVERTISEMENT

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2020, 15:35 IST
Last Updated 7 ಏಪ್ರಿಲ್ 2020, 15:35 IST
ಪ್ರಭು ಚವಾಣ್
ಪ್ರಭು ಚವಾಣ್   

ಬೀದರ್: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರು ಏಪ್ರಿಲ್ 8ರಿಂದ ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಏ.8ರಂದು ಬೆಳಿಗ್ಗೆ 9.30ಕ್ಕೆ ಘಮಸುಬಾಯಿ ತಾಂಡಾದಿಂದ ಹೊರಟು ಬೀದರ್ ನಗರಕ್ಕೆ ಆಗಮಿಸುವರು.

ಮಧ್ಯಾಹ್ನ 12 ಗಂಟೆಗೆ ಕೋವಿಡ್ 19 ಸೋಂಕು ಮತ್ತು ಲಾಕ್‍ಡೌನ್ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸುವರು.

ADVERTISEMENT

ಬಳಿಕ ಘಮಸುಬಾಯಿ ತಾಂಡಾಕ್ಕೆ ತೆರಳಿ ವಾಸ್ತವ್ಯ ಮಾಡುವರು. ಏಪ್ರಿಲ್ 9 ಮತ್ತು 10ರಂದು ಘಮಸುಬಾಯಿ ತಾಂಡಾದಲ್ಲೇ ವಾಸ್ತವ್ಯ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.