ಬೀದರ್: ಇಲ್ಲಿಯ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಗುರುವಾರ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯತಿಥಿ ಆಚರಿಸಲಾಯಿತು.
ಪಕ್ಷದ ಜಿಲ್ಲಾ ಘಟಕದ ವಕ್ತಾರ ರಾಜಶೇಖರ ಪಾಟೀಲ ಅಷ್ಟೂರ ಅವರು, ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
‘ರಾಜೀವ್ ಗಾಂಧಿ ಅವರು ದೇಶ ಕಂಡ ಉತ್ತಮ ನಾಯಕರಲ್ಲಿ ಒಬ್ಬರಾಗಿದ್ದರು. ಪ್ರಧಾನಿಯಾಗಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ದೇಶಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದರು‘ ಎಂದು ಅವರು ಸ್ಮರಿಸಿದರು.
ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ವೆಂಕಟರಾವ್ ಸಿಂಧೆ, ಪರಿಶಿಷ್ಟ ಜಾತಿ ಜಿಲ್ಲಾ ಘಟಕದ ಅಧ್ಯಕ್ಷ ಸಂಜುಕುಮಾರ ಡಿ.ಕೆ., ಸುನೀಲ ಬಚ್ಚನ್ ಮತ್ತಿತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.