ADVERTISEMENT

ಬೀದರ್: ಕಾರಂಜಾ ಜಲಾಶಯ ಭರ್ತಿ, ಎರಡು ಕ್ರಸ್ಟ್‌ ಗೇಟ್‌ಗಳಿಂದ ನೀರು ಹೊರಕ್ಕೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 8:38 IST
Last Updated 23 ಜುಲೈ 2021, 8:38 IST
ಕಾರಂಜಾ ಜಲಾಶಯದಿಂದ ನೀರು ಹೊರಕ್ಕೆ ಬಿಡಲಾಯಿತು
ಕಾರಂಜಾ ಜಲಾಶಯದಿಂದ ನೀರು ಹೊರಕ್ಕೆ ಬಿಡಲಾಯಿತು   

ಬೀದರ್: ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಕಾರಂಜಾ ಜಲಾಶಯ ಭರ್ತಿಯಾಗಿದೆ. ಗೋದಾವರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ 729 ಕ್ಯೂಸೆಕ್‌ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ.

ಎರಡು ಕ್ರಸ್ಟ್‌ ಗೇಟ್‌ಗಳನ್ನು ತೆರೆದು 600 ಕ್ಯೂಸೆಕ್‌ ನೀರು ಹರಿಯ ಬಿಡಲಾಗಿದೆ. 7.691 ಟಿಎಂಸಿ ಸಾಮರ್ಥ್ಯದ ಜಲಾಶಯ ಐದು ವರ್ಷಗಳ ಅವಧಿಯಲ್ಲಿ ಎರಡನೇ ಬಾರಿ ತುಂಬಿದೆ.

ನದಿ ಹಾಗೂ ಕಾಲುವೆ ಪಕ್ಕದ ಗ್ರಾಮಗಳ ಜನರು ಎಚ್ಚರ ವಹಿಸಬೇಕು ಎಂದು ಕಾರಂಜಾ ಯೋಜನೆಯ ಕಾರ್ಯನಿರ್ವಾಹಕ ಎಂಜಿನಿಯರ್‌ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.