ADVERTISEMENT

ಪ್ರಧಾನಮಂತ್ರಿ ಆವಾಸ್ ಯೋಜನೆ ಪ್ರಯೋಜನಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 1 ಜುಲೈ 2020, 17:19 IST
Last Updated 1 ಜುಲೈ 2020, 17:19 IST
ಭಗವಂತ ಖೂಬಾ
ಭಗವಂತ ಖೂಬಾ   

ಬೀದರ್: ಜಿಲ್ಲೆಯ ಬಡ ಹಾಗೂ ಮಧ್ಯಮ ವರ್ಗದ ಜನ ಪ್ರಧಾನಮಂತ್ರಿ ಆವಾಸ್ ಯೋಜನೆಯ ಪ್ರಯೋಜನ ಪಡೆಯಬೇಕು ಎಂದು ಸಂಸದ ಭಗವಂತ ಖೂಬಾ ಮನವಿ ಮಾಡಿದ್ದಾರೆ.

ದೇಶದಲ್ಲಿ ಎಲ್ಲರೂ ಸೂರು ಹೊಂದಬೇಕು ಎನ್ನುವ ಆಶಯದೊಂದಿಗೆ ಮೋದಿ ಅವರು ಪ್ರಧಾನಮಂತ್ರಿ ಆವಾಸ್ ಯೋಜನೆ ಜಾರಿಗೊಳಿಸಿದ್ದಾರೆ. ಯೋಜನೆಯಡಿ ಜಿಲ್ಲೆಯಲ್ಲಿ ಈವರೆಗೆ 18,202 ಜನ ಮನೆ ನಿರ್ಮಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಬಡವರು ಹಾಗೂ ಮಧ್ಯಮ ವರ್ಗದವರು ಯೋಜನೆಯಡಿ ಸಾಲ ಪಡೆದು ಮನೆ ನಿರ್ಮಿಸಿಕೊಳ್ಳಬಹುದು ಇಲ್ಲವೇ ಕೊಂಡುಕೊಳ್ಳಬಹುದು. ಯೋಜನೆಯಡಿ ಸರ್ಕಾರ ಸಬ್ಸಿಡಿ ಒದಗಿಸಲಿದೆ. ಅರ್ಹರು ತಮ್ಮ ಹತ್ತಿರದ ಬ್ಯಾಂಕ್‍ಗಳಲ್ಲಿ ಅರ್ಜಿ ಪಡೆದು, ಅಗತ್ಯ ದಾಖಲೆಗಳನ್ನು ಸಲ್ಲಿಸಿ, ಸಾಲ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.