ಬೀದರ್: ಕೋವಿಡ್ 19 ಸೋಂಕು ಹರಡದಂತೆ ಮುಂಜಾಗ್ರತೆ ವಹಿಸುವ ಕುರಿತು ಇಲ್ಲಿಯ ನಗರಸಭೆ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹೋಟೆಲ್, ಖಾನಾವಳಿ, ಬೇಕರಿ, ಪಾನ್ ಶಾಪ್ ಹಾಗೂ ಇತರ ಅಂಗಡಿಗಳ ಮಾಲೀಕರ ಸಭೆ ನಡೆಯಿತು.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ 19 ಸೋಂಕು ನಿಯಂತ್ರಿಸಲು ಅಂಗಡಿಗಳನ್ನು ಮುಚ್ಚಿಡುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಎಲ್ಲರೂ ಸಹಕರಿಸಬೇಕು ಎಂದು ನಗರಸಭೆ ಆಯುಕ್ತ ಬಸಪ್ಪ ಮನವಿ ಮಾಡಿದರು.
‘ಮಲ್ಟಿಪ್ಲೆಕ್ಸ್, ಚಿತ್ರಮಂದಿರ, ಉದ್ಯಾ, ನಾಟಕ ಪ್ರದರ್ಶನ, ವಸ್ತು ಪ್ರದರ್ಶನ, ಸಂಗೀತ ಹಬ್ಬ, ಸರ್ಕಾರಿ ಸಮಾರಂಭಗಳನ್ನು ರದ್ದುಗೊಳಿಸಲಾಗಿದೆ. ಮಾರ್ಚ್ 31ರ ವರೆಗೆ ಹೇರ್ ಕಟಿಂಗ್ ಅಂಗಡಿ ಮತ್ತು ಪಾರ್ಲರ್ಗಳನ್ನು ಮುಚ್ಚಿಡಲು ಆದೇಶಿಸಲಾಗಿದೆ. ಯಾರಾದರೂ ಆದೇಶ ಉಲ್ಲಂಘಿಸಿ ಅಂಗಡಿ ತೆರೆದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.
ತರಕಾರಿ, ಕಿರಾಣಿ ಅಂಗಡಿ ಮತ್ತು ಔಷಧ ಅಂಗಡಿಗಳಿಗಳನ್ನು ತೆರೆದಿಡಲು ಅವಕಾಶ ಕೊಡಲಾಗಿದೆ’ ಎಂದು ತಿಳಿಸಿದರು.
ಸ್ವಯಂ ಪ್ರೇರಣೆಯಿಂದ ಅಂಗಡಿ ಬಂದ್ ಮಾಡಲಾಗುವುದು ಎಂದು ವ್ಯಾಪಾರಿಗಳು ಒಮ್ಮತದಿಂದ ತಿಳಿಸಿದರು. ತಹಶೀಲ್ದಾರ್ ಕೀರ್ತಿ ಚಾಲಕ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.