ಬೀದರ್: ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ಕಚೇರಿಯಲ್ಲಿ ಮಂಗಳವಾರ ಮನೆ ಮನೆ ಸಂಪರ್ಕ ಮತ್ತು ಸಂಕಲ್ಪ ದೀಕ್ಷೆ ಕಾರ್ಯಕ್ರಮದ ಅಂಗವಾಗಿ ಕರಪತ್ರ ಬಿಡುಗಡೆಗೊಳಿಸಲಾಯಿತು.
ಸಂಸದ ಭಗವಂತ ಖೂಬಾ ಕರಪತ್ರ ಬಿಡುಗಡೆ ಮಾಡಿ ಮಾತನಾಡಿ ಕೇಂದ್ರ ಸರ್ಕಾರದ ಒಂದು ವರ್ಷದ ಸಾಧನೆಯನ್ನು ವಿವರಿಸಿದರು.
ಪಕ್ಷದ ಜಲ್ಲಾ ಘಕಟದ ಅಧ್ಯಕ್ಷ ಶಿವಾನಂದ ಮಂಠಾಳಕರ್, ವಿಭಾಗ ಸಹ ಪ್ರಮುಖ ಈಶ್ವರಸಿಂಗ್ ಠಾಕೂರ, ಪ್ರಧಾನ ಕಾರ್ಯದರ್ಶಿ ಅಶೋಕ ಹೊಕ್ರಾಣೆ, ಮಲ್ಲಿಕಾರ್ಜುನ ಕುಂಬಾರ, ನಗರ ಘಟಕದ ಅಧ್ಯಕ್ಷ ಹಣಮಂತ ಬುಳ್ಳಾ, ರೌಫೋದ್ದಿನ್ ಕಚೇರಿವಾಲೆ, ಅಭಿಯಾನದ ಸಹ ಮ್ರಮುಖರಾದ ಮಹೇಶ್ವರ ಸ್ವಾಮಿ, ಉಪೇಂದ್ರ ದೇಶಪಾಂಡೆ, ಬಸವರಾಜ ಜೋಜನಾ ಹಾಗೂ ಸುರೇಶ ಮಾಶೆಟ್ಟಿ ಇದ್ದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.