ಬೀದರ್: ಜಿಲ್ಲೆಯ ತಾಲ್ಲೂಕಿನ ನಾಗೂರ (ಬಿ) ಗ್ರಾಮದ ಮಹಿಳೆಯೊಬ್ಬರು ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾರೆ.
ಸುಮನ್ಬಾಯಿ ಬಾಬುರೆಡ್ಡಿ ಖಂದಾಡೆ (48) ಮಂಗಳವಾರ ಸಂಜೆ ಹೊಲದಿಂದ ಮನೆಗೆ ಬರುವಾಗ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಮಹಿಳೆಯ ಪತಿ ಬಾಬುರೆಡ್ಡಿ ಪೊಲೀಸರಿಗೆ ದೂರು ನೀಡಿದ್ದಾರೆ.
‘ನನ್ನ ಪತ್ನಿ ಮಂಗಳವಾರ ಮಸ್ಕಲ್ ಪ್ರದೇಶದಲ್ಲಿರುವ ಹೊಲಕ್ಕೆ ಹೋಗಿದ್ದರು. ಮಧ್ಯಾಹ್ನ ಮಳೆ ಅಬ್ಬರಿಸಿ ಗ್ರಾಮದ ಮಧ್ಯದಲ್ಲಿರುವ ಹಳ್ಳಕ್ಕೆ ಪ್ರವಾಹ ಬಂದಿದೆ. ಹಳ್ಳ ದಾಟುವಾಗ ನೀರಿನಲ್ಲಿ ಕೊಂಚ್ಚಿಕೊಂಡು ಹೋಗಿದ್ದಾರೆ. ಹಳ್ಳದ ಸುತ್ತಲೂ ಸಾಕಷ್ಟು ಹುಡುಕಾಡಿದರೂ ಪತ್ತೆಯಾಗಿಲ್ಲ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.