ADVERTISEMENT

ಕಾರ್ಮಿಕರ ಜತೆ ಉದ್ಯೋಗ ಖಾತರಿ ಕೆಲಸ ಮಾಡಿದ ಸಿಇಒ

​ಪ್ರಜಾವಾಣಿ ವಾರ್ತೆ
Published 1 ಮೇ 2020, 14:22 IST
Last Updated 1 ಮೇ 2020, 14:22 IST
ಔರಾದ್ ತಾಲ್ಲೂಕಿನ ಚಿಕ್ಲಿ (ಜೆ) ಗ್ರಾಮಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಜ್ಞಾನೇಂದ್ರಕುಮಾರ ಗಂಗ್ವಾರ್ ಭೇಟಿ ನೀಡಿ ಕಾರ್ಮಿಕರ ಜತೆ ಕೆಲಹೊತ್ತು ಕೆಲಸ ಮಾಡಿದರು
ಔರಾದ್ ತಾಲ್ಲೂಕಿನ ಚಿಕ್ಲಿ (ಜೆ) ಗ್ರಾಮಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಜ್ಞಾನೇಂದ್ರಕುಮಾರ ಗಂಗ್ವಾರ್ ಭೇಟಿ ನೀಡಿ ಕಾರ್ಮಿಕರ ಜತೆ ಕೆಲಹೊತ್ತು ಕೆಲಸ ಮಾಡಿದರು   

ಔರಾದ್ (ಬೀದರ್‌ ಜಿಲ್ಲೆ): ಜಿಲ್ಲಾ ಪಂಚಾಯಿತಿ ಸಿಇಒ ಜ್ಞಾನೇಂದ್ರಕುಮಾರ ಗಂಗ್ವಾರ್ ಅವರು ಕಾರ್ಮಿಕರ ಜತೆಗೂಡಿ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ಕೆಲಹೊತ್ತು ಕೆಲಸ ಮಾಡುವ ಮೂಲಕ ಆತ್ಮಸ್ಥೈರ್ಯ ತುಂಬಿದರು.

ತಾಲ್ಲೂಕಿನ ಚಿಕ್ಲಿ (ಜೆ) ಗ್ರಾಮದಲ್ಲಿ ‘ನರೇಗಾ’ದಡಿ 150 ಕಾರ್ಮಿಕರು ಕೆರೆ ಹೂಳೆತ್ತುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಕಾರ್ಮಿಕ ದಿನ ನಿಮಿತ್ತ ಕಾರ್ಮಿಕರನ್ನು ಭೇಟಿ ಮಾಡಲು ಬಂದಿದ್ದ ಸಿಇಒ, ಕೈಯಲ್ಲಿ ಸಲಿಕೆ ಹಿಡಿದು ಮಣ್ಣು ತೆಗೆದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬೀರೇಂದ್ರಸಿಂಗ್, ತಾಲ್ಲೂಕು ಪಂಚಾಯಿತಿ ಇಒ ಮಾಣಿಕರಾವ ಪಾಟೀಲ, ಸಹಾಯಕ ನಿರ್ದೇಶಕ ಶಿವಾನಂದ ಔರಾದೆ ಅವರೂ ಸಿಇಒ ಜತೆಗೆ ಕೈಜೋಡಿಸಿ ಕೆಲ ಹೊತ್ತು ಕೆಲಸ ಮಾಡಿದರು.

ADVERTISEMENT

ನಂತರ ಕಾರ್ಮಿಕರ ಯೋಗಕ್ಷೇಮವನ್ನು ವಿಚಾರಿಸಿದ ಸಿಇಒ, 'ಎಷ್ಟು ದಿನದಿಂದ ಕೆಲಸ ಮಾಡುತ್ತಿದ್ದೀರಿ. ಕೂಲಿ ಸಿಕ್ಕಿದೆಯಾ' ಎಂದೂ ಮಾಹಿತಿ ಪಡೆದುಕೊಂಡರು.

'ಕಾರ್ಮಿಕರು ನಮ್ಮ ಹೆಮ್ಮೆ. ದೇಶದ ಅಭಿವೃದ್ಧಿಯಲ್ಲಿ ಅವರ ಪಾತ್ರ ಮಹತ್ವದ್ದು' ಎಂದು ಅವರ ಕೆಲಸವನ್ನು ಶ್ಲಾಘಿಸಿದರು. ನಂತರ ಕೇಕ್ ಕತ್ತರಿಸಿ ಅವರ ಜತೆ ಸಂತಸ ಹಂಚಿಕೊಂಡರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.