ಚಿಟಗುಪ್ಪ: ಎರಡು ಬೈಕ್ಗಳು ಮುಖಾ ಮುಖಿ ಡಿಕ್ಕಿ ಹೊಡೆದಿದ್ದರಿಂದ ಸವಾರ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ತಾಲ್ಲೂಕಿನ ನಿರ್ಣಾ ಗ್ರಾಮದಿಂದ ಬಸಿಲಾಪುರ್ ಗ್ರಾಮಕ್ಕೆ ಹೋಗುವ ರಸ್ತೆ ಮೇಲೆ ಶುಕ್ರವಾರ ಸಂಭವಿಸಿದೆ.
ನಿರ್ಣಾದಿಂದ ಬಸಿಲಾಪುರ ಹೋಗುವಾಗ ಎದುರುಗಡೆಯಿಂದ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಕ್ಕೆ ಡಾವರಗಾಂವ್ ಗ್ರಾಮದ ನಿವಾಸಿ ಲಿಂಗರಾಜ್ ನಾಗಭೂಷಣ (29) ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಮನ್ನಾಎಖ್ಖೇಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.