ADVERTISEMENT

ಬಿಜೆಪಿ ಜನ ಸಂಕಲ್ಪ ಯಾತ್ರೆ

ತೇರು ಮೈದಾನದಲ್ಲಿ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2022, 5:09 IST
Last Updated 18 ಅಕ್ಟೋಬರ್ 2022, 5:09 IST
ಹುಮನಾಬಾದ್ ಪಟ್ಟಣದ ತೇರು ಮೈದಾನದಲ್ಲಿ ಜನಸಂಕಲ್ಪ ಯಾತ್ರೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ
ಹುಮನಾಬಾದ್ ಪಟ್ಟಣದ ತೇರು ಮೈದಾನದಲ್ಲಿ ಜನಸಂಕಲ್ಪ ಯಾತ್ರೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ   

ಹುಮನಾಬಾದ್: ಬಿಜೆಪಿಯ ಜನ ಸಂಕಲ್ಪ ಯಾತ್ರೆಗಾಗಿ ಪಟ್ಟಣದ ತೇರು ಮೈದಾನದಲ್ಲಿ ವೇದಿಕೆ ಸಿದ್ಧಪಡಿಸಲಾಗಿದೆ.

ಪ್ರವಾಸಿ ಮಂದಿರದ ಮುಂಭಾಗ, ಎಪಿಎಂಸಿ ಗೇಟ್, ಕೇಂದ್ರ ಬಸ್ ನಿಲ್ದಾಣದ ಮುಂಭಾಗ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ವೀರಭದ್ರೇಶ್ವರ ಅಗ್ನಿಕುಂಡ ಹಾಗೂ ಹಳೆ ತಹಶೀಲ್‌ ಕಚೇರಿ, ಬಾಲಾಜಿ ಮಂದಿರ, ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತ ಸೇರಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬ್ಯಾನ ರ್‌ಗಳು ರಾರಾಜಿಸುತ್ತಿವೆ.

ಗಣ್ಯರ ಆಗಮನಕ್ಕಾಗಿ ವಿಶೇಷ ದ್ವಾರ ಮಾಡಲಾಗಿದೆ. ಕಾರ್ಯಕರ್ತರಿಗಾಗಿ ಮತ್ತೊಂದು ಪ್ರವೇಶ ದ್ವಾರ ನಿರ್ಮಿಸಲಾಗಿದೆ.

ADVERTISEMENT

ಪಟ್ಟಣದ ಈದ್ಗಾ ಮೈದಾನದ ಹತ್ತಿರ ಒಡ್ಡುರು ಮೈದಾನದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆಯನ್ನು ಮಾಡಲಾಗಿದೆ.

ಪೊಲೀಸ್ ಬೀಗಿ ಬಂದೋಬಸ್ತ್: ಜನಸಂಕಲ್ಪ ಯಾತ್ರೆಯ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಭದ್ರತೆಗಾಗಿ ಎಸ್ಪಿ, ಹೆಚ್ಚುವರಿ ಎಸ್ಪಿ, ಡಿವೈಎಸ್ಪಿ 2, ಪಿಐ 6, ಪಿಎಸ್‍ಐ 29, ಎಎಸ್‍ಐ 32, 304 ಪುರುಷ ಸಿಬ್ಬಂದಿ, 60 ಮಹಿಳಾ ಸಿಬ್ಬಂದಿ ಹಾಗೂ 175 ಜನ ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೆ, ಮೂರು ಡಿಆರ್ ತುಕಡಿ ಹಾಗೂ ಕೆಎಸ್‌ಆರ್‌ಪಿಯ ಒಂದು ತುಕಡಿ ನಿಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.