ADVERTISEMENT

ಬಿಜೆಪಿಗೆ ಸೇರ್ಪಡೆ ಆಗುತ್ತಿರುವವರೂ ಹೊರಗಿನವರೇ: ಮಲ್ಲಿಕಾರ್ಜುನ ಖೂಬಾ

ಉಪ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2021, 5:54 IST
Last Updated 12 ಏಪ್ರಿಲ್ 2021, 5:54 IST
ಮಲ್ಲಿಕಾರ್ಜುನ ಖೂಬಾ
ಮಲ್ಲಿಕಾರ್ಜುನ ಖೂಬಾ   

ಬಸವಕಲ್ಯಾಣ: ‘ಬಿಜೆಪಿ ಅಭ್ಯರ್ಥಿ ಶರಣು ಸಲಗರ, ಇಲ್ಲಿ ನಡೆದ ಸಭೆಗಳಲ್ಲಿ ಪಕ್ಷಕ್ಕೆ ಸೇರ್ಪಡೆಯಾದ ಪ್ರಕಾಶ ಖಂಡ್ರೆ, ಸಿದ್ದು ಪಾಟೀಲ ಇವರು ಹೊರಗಿನವರೇ ಆಗಿದ್ದಾರೆ. ಅಷ್ಟೇ ಅಲ್ಲ; ಇದುವರೆಗೆ ನಡೆದ ಸೇರ್ಪಡೆ ಕಾರ್ಯಕ್ರಮಗಳಲ್ಲಿ ಘಾಟಬೋರಾಳ, ಹುಮನಾಬಾದ್, ಕಲಬುರ್ಗಿಯ ಕಾರ್ಯಕರ್ತರೇ ಪಾಲ್ಗೊಂಡಿದ್ದರು. ಸ್ಥಳೀಯ ಕಾರ್ಯಕರ್ತರೇ ಆ ಪಕ್ಷದಲ್ಲಿಲ್ಲ’ ಎಂದು ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ವಾಗ್ದಾಳಿ ನಡೆಸಿದರು.

ಇಲ್ಲಿ ಭಾನುವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ‘ಬಿಜೆಪಿಗೆ ಎಲ್ಲರೂ ಹೊರಗಿನವರೇ ಬೇಕು. ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ನಾಮನಿರ್ದೇಶಿತ ಸದಸ್ಯರನ್ನಾಗಿಯೂ ಔರಾದ್‌ನ ಕಿರಣ ಪಾಟೀಲ ಎನ್ನುವ ವರನ್ನು ನೇಮಿಸಲಾಗಿದೆ. ಇಲ್ಲಿ ಬಸವ ಭಕ್ತರೇ ಇರಲಿಲ್ಲವೇ? ನನಗೆ 2 ಸಾವಿರ ಮತ ದೊರಕುವುದಿಲ್ಲ ಎಂದು ಭಗವಂತ ಖೂಬಾ ಸಭೆಗಳಲ್ಲಿ ಹೇಳುತ್ತಿದ್ದಾರೆ. ಚುನಾವಣೆಯಲ್ಲಿ ಎಷ್ಟು ಮತ ಬರುತ್ತವೆ ಎಂದು ಜನ ತೋರಿಸುವರು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT