ಭಾಲ್ಕಿ: ತಾಲ್ಲೂಕಿನ ಗಣೇಶಪೂರ ವಾಡಿಯ ಬಿಜೆಪಿ ಮುಖಂಡ ಶಿವಾಜಿರಾವ್ ಭೋಸ್ಲೆ (55) ಕಲಬುರ್ಗಿ ಆಸ್ಪತ್ರೆಯಲ್ಲಿ ಬುಧವಾರ ಕೋವಿಡ್ನಿಂದಾಗಿ ಸಾವನ್ನಪ್ಪಿದ್ದಾರೆ.
ಭೋಸ್ಲೆ ಅವರಿಗೆ ಕೊರೊನಾ ದೃಢಪಟ್ಟಿರುವುದರಿಂದ ಕಲಬುರ್ಗಿಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆ ದಿದ್ದಾರೆ. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ತಾಲ್ಲೂಕಿನ ಸ್ವಗ್ರಾಮವಾದ ಗಣೇಶಪೂರ ವಾಡಿಯಲ್ಲಿ ಬುಧವಾರ ಸಂಜೆ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.