ಬೀದರ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸಿದ ಪ್ರಯುಕ್ತ ಪಕ್ಷದ ನಗರ ಮಂಡಲ ಕಾರ್ಯಕರ್ತರು ನಗರದಲ್ಲಿ ಗುರುವಾರ ವಿಜಯೋತ್ಸವ ಆಚರಿಸಿದರು.
ನಗರದ ಶಿವನಗರದಲ್ಲಿ ಇರುವ ಪಕ್ಷದ ಕಚೇರಿ ಎದುರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ಆಚರಿಸಿದರು.
ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಬಿಜೆಪಿ ಕಲಬುರಗಿ ವಿಭಾಗ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ಎಸ್. ಪಾಟೀಲ ಗಾದಗಿ, ಮುಖಂಡ ಎನ್.ಆರ್. ವರ್ಮಾ, ನಗರ ಮಂಡಲ ಅಧ್ಯಕ್ಷ ಶಶಿದರ ಹೊಸಳ್ಳಿ, ರಾಜಕುಮಾರ ಚಿದ್ರಿ, ಮಹೇಶ್ವರ ಸ್ವಾಮಿ, ಸುಭಾಷ್ ಮಡಿವಾಳ, ರೋಶನ್ ವರ್ಮಾ, ಗಣೇಶ, ನರೇಶ ಗೌಳಿ, ಸುನೀಲ್ ಗೌಳಿ, ನಿತಿನ್ ನವಲಕಿಲೆ, ಸಂಜಯ್ ಜೀರ್ಗಾ, ಪ್ರಸನ್ನಲಕ್ಷ್ಮಿ ದೇಶಪಾಂಡೆ, ಸರಸ್ವತಿ ಪಾಟೀಲ, ಸಂಗಮೇಶ ನಾಸಿಗಾರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.