ಬಸವಕಲ್ಯಾಣ: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದಿಂದ ಪ್ರಧಾನಿ ನರೇಂದ್ರ ಮೋದಿಯವರ 70 ನೇ ಜನ್ಮದಿನದ ಅಂಗವಾಗಿ ಗುರುವಾರ ಇಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 70 ಜನರು ರಕ್ತದಾನ ಮಾಡಿದರು.
ಮೋರ್ಚಾ ಪ್ರಧಾನ ಕಾರ್ಯದರ್ಶಿ ದೀಪಕ ಗುಡ್ಡಾ ನೇತೃತ್ವ ವಹಿಸಿದ್ದರು.
ಪಕ್ಷದ ನಗರ ಘಟಕದ ಅಧ್ಯಕ್ಷ ಕೃಷ್ಣಾ ಗೋಣೆ, ಮಲ್ಲಿಕಾರ್ಜುನ ಕುಂಬಾರ, ದೀಪಕ ಗಾಯಕವಾಡ, ಶಂಕರ ನಾಗದೆ, ಅರವಿಂದ ಮುತ್ತೆ, ಯುವರಾಜ ಜಾಧವ, ಮನೋಜ ತಂಬುರ್ಜೆ, ರಾಚಣ್ಣಸ್ವಾಮಿ, ಅಮರ ಬಡದಾಳೆ, ರಾಜಕುಮಾರ ಜಮಾದಾರ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.