ADVERTISEMENT

ರಾಹುಲ್‌ ಗಾಂಧಿ ಜನ್ಮದಿನಾಚರಣೆ: ಕಾಂಗ್ರೆಸ್‌ ಕಾರ್ಯಕರ್ತರಿಂದ ರಕ್ತದಾನ

​ಪ್ರಜಾವಾಣಿ ವಾರ್ತೆ
Published 19 ಜೂನ್ 2021, 14:46 IST
Last Updated 19 ಜೂನ್ 2021, 14:46 IST
ಬೀದರ್‌ನ ಅಕ್ಕಮಹಾದೇವಿ ಕಾಲೇಜಿನ ಆವರಣದಲ್ಲಿ ಶನಿವಾರ ರಾಹುಲ್‌ ಗಾಂಧಿ ಜನ್ಮದಿನಾಚರಣೆ ಪ್ರಯುಕ್ತ ಕಾಂಗ್ರೆಸ್‌ ಕಾರ್ಯಕರ್ತರು ರಕ್ತದಾನ ಮಾಡಿದರು
ಬೀದರ್‌ನ ಅಕ್ಕಮಹಾದೇವಿ ಕಾಲೇಜಿನ ಆವರಣದಲ್ಲಿ ಶನಿವಾರ ರಾಹುಲ್‌ ಗಾಂಧಿ ಜನ್ಮದಿನಾಚರಣೆ ಪ್ರಯುಕ್ತ ಕಾಂಗ್ರೆಸ್‌ ಕಾರ್ಯಕರ್ತರು ರಕ್ತದಾನ ಮಾಡಿದರು   

ಬೀದರ್‌: ರಾಹುಲ್‌ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ನಗರದ ಅಕ್ಕ ಮಹಾದೇವಿ ಮಹಿಳಾ ಕಾಲೇಜಿನ ಆವರಣದಲ್ಲಿ ಶನಿವಾರ ಕಾಂಗ್ರೆಸ್‌ ಕಾರ್ಯಕರ್ತರು ರಕ್ತದಾನ ಮಾಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಕೋವಿಡ್‌ ಸೋಂಕಿತರು, ರೋಗಿಗಳಿಗೆ ಹಣ್ಣು ಹಂಪಲ, ಮಾಸ್ಕ್‌ ವಿತರಿಸಲಾಯಿತು.

ಶಾಸಕರಾದ ರಾಜಶೇಖರ್ ಪಾಟೀಲ, ರಹೀಂ ಖಾನ್, ವಿಧಾನ ಪರಿಷತ್‌ ಅರವಿಂದಕುಮಾರ ಅರಳಿ, ಮಾಜಿ ಸಂಸದ ನರಸಿಂಗ್‌ ಸೂರ್ಯವಂಶಿ, ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಜಿಲ್ಲಾ ಎಸ್‌.ಸಿ ಎಸ್.ಸಿ ಘಟಕದ ಅಧ್ಯಕ್ಷ ಡಿ.ಕೆ.ಸಂಜುಕುಮಾರ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮೀನಾಕ್ಷಿ, ವನಿಲಾ, ಯುವ ಕಾಂಗ್ರೆಸ್‌ ಅದ್ಯಕ್ಷ ಬರೀದ್‌, ಆನಂದ ದೇವಪ್ಪ, ಇರ್ಷಾದ್ ಪೈಲ್ವಾನ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.