ADVERTISEMENT

20 ಜನರಿಂದ ರಕ್ತದಾನ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2021, 14:18 IST
Last Updated 2 ಸೆಪ್ಟೆಂಬರ್ 2021, 14:18 IST
ಬೀದರ್‌ನ ಐಎಂಎ ಹಾಲ್‍ನಲ್ಲಿ ನಡೆದ ಶಿಬಿರದಲ್ಲಿ ಎನ್‍ಸಿಸಿ ವಿದ್ಯಾರ್ಥಿಯೊಬ್ಬರು ರಕ್ತದಾನ ಮಾಡಿದರು
ಬೀದರ್‌ನ ಐಎಂಎ ಹಾಲ್‍ನಲ್ಲಿ ನಡೆದ ಶಿಬಿರದಲ್ಲಿ ಎನ್‍ಸಿಸಿ ವಿದ್ಯಾರ್ಥಿಯೊಬ್ಬರು ರಕ್ತದಾನ ಮಾಡಿದರು   



ಬೀದರ್: ರೋಟರಿ ಕ್ಲಬ್ ಆಫ್ ಬೀದರ್ ಫೋರ್ಟ್, ಬ್ರಿಮ್ಸ್ ಆಸ್ಪತ್ರೆಯ ರಕ್ತನಿಧಿ ಕೇಂದ್ರ ಹಾಗೂ ಕಿಚ್ಚ ಸುದೀಪ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಚಿತ್ರನಟ ಸುದೀಪ್ ಜನ್ಮದಿನದ ಪ್ರಯುಕ್ತ ಇಲ್ಲಿಯ ಐಎಂಎ ಹಾಲ್‍ನಲ್ಲಿ ನಡೆದ ಶಿಬಿರದಲ್ಲಿ 20 ಜನ ರಕ್ತದಾನ ಮಾಡಿದರು.

ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ರೋಟರಿ ಕ್ಲಬ್ ಆಫ್ ಬೀದರ್ ಫೋರ್ಟ್ ಅಧ್ಯಕ್ಷ ಎಸ್.ಬಿ. ಚಿಟ್ಟಾ ಅವರು, ರಕ್ತದಾನ ಎಲ್ಲ ದಾನಗಳಲ್ಲೇ ಶ್ರೇಷ್ಠವಾಗಿದೆ. ರಕ್ತದಾನದಿಂದ ಜೀವ ಉಳಿಸಬಹುದು. ಕಾರಣ, ಯುವಕರು ರಕ್ತದಾನಕ್ಕೆ ಮುಂದೆ ಬರಬೇಕು ಎಂದು ಮನವಿ ಮಾಡಿದರು.

ಬ್ರಿಮ್ಸ್ ರಕ್ತನಿಧಿ ಕೇಂದ್ರದ ಡಾ. ವೀರೇಂದ್ರ ಪಾಟೀಲ ಮಾತನಾಡಿದರು. ರಾಜ್ಯ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಕಾರ್ಯದರ್ಶಿ ಸುಧೀಂದ್ರ ಸಿಂದೋಲ್, ರೋಟರಿ ಕ್ಲಬ್ ಕಾರ್ಯದರ್ಶಿ ಅನಿಲಕುಮಾರ ಔರಾದೆ, ಇನ್ನರ್ ವ್ಹಿಲ್ ಕ್ಲಬ್ ಅಧ್ಯಕ್ಷೆ ಸುನೈನಾ ಗುತ್ತಿ, ಡಾ.ಸುಭಾಷ ಬಶೆಟ್ಟಿ, ಜಹೀರ್ ಅನ್ವರ್, ಶೇಖರ ರಾಗಾ, ಭರತ ಪಾಟೀಲ, ಕಾಶಿನಾಥ ಪಾಟೀಲ, ಗುಂಡಪ್ಪ ಘೋದೆ, ಸೂರ್ಯಕಾಂತ ರಾಮಶೆಟ್ಟಿ, ಅನಿತಾ ಚಿಂತಾಮಣಿ ಇದ್ದರು.

ADVERTISEMENT

ರಕ್ತದಾನಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಶಿವಕುಮಾರ ಯಲಾಲ್ ಸ್ವಾಗತಿಸಿದರು. ಸತ್ಯಪ್ರಕಾಶ ಹಳ್ಳಿಖೇಡಕರ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.