ADVERTISEMENT

‘ಬದಲಾಗೋಣ’ ಕವನ ಸಂಕಲನ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 25 ಜನವರಿ 2021, 15:13 IST
Last Updated 25 ಜನವರಿ 2021, 15:13 IST
ಬೀದರ್‌ನ ಹೋಟೆಲ್ ಮಹಾಲಕ್ಷ್ಮಿ ಸಭಾಂಗಣದಲ್ಲಿ ನಡೆದ ‘ಬದಲಾಗೋಣ’ ಕವನ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಕವಿ ಮಾಣಿಕ ನೇಳಗೆ ಅವರನ್ನು ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕದ ರಾಜ್ಯ ಅಧ್ಯಕ್ಷ ಸುಬ್ಬಣ್ಣ ಕರಕನಳ್ಳಿ ಸನ್ಮಾನಿಸಿದರು
ಬೀದರ್‌ನ ಹೋಟೆಲ್ ಮಹಾಲಕ್ಷ್ಮಿ ಸಭಾಂಗಣದಲ್ಲಿ ನಡೆದ ‘ಬದಲಾಗೋಣ’ ಕವನ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಕವಿ ಮಾಣಿಕ ನೇಳಗೆ ಅವರನ್ನು ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕದ ರಾಜ್ಯ ಅಧ್ಯಕ್ಷ ಸುಬ್ಬಣ್ಣ ಕರಕನಳ್ಳಿ ಸನ್ಮಾನಿಸಿದರು   

ಬೀದರ್: ಇಲ್ಲಿಯ ಹೋಟೆಲ್ ಮಹಾಲಕ್ಷ್ಮಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಹಿತಿ ಚಂದ್ರಗುಪ್ತ ಚಾಂದಕವಠೆ ಅವರು ಕವಿ ಮಾಣಿಕ ನೇಳಗೆ ಅವರ ‘ಬದಲಾಗೋಣ’ ಕವನ ಸಂಕಲನ ಬಿಡುಗಡೆ ಮಾಡಿದರು.

ಕವನ ಸಂಕಲನ ಕುರಿತು ಡಾ. ಮಹೇಶ ಜೋಶಿ, ಡಾ. ರಾಮಚಂದ್ರ ಗಣಾಪುರ, ಸಂಶೋಧಕ ಡಾ.ಎಂ.ಎಸ್. ಶಿರವಾಳ ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿಯ ಸಂಘ ಸಂಸ್ಥೆಗಳ ಪ್ರತಿನಿಧಿ ಪ್ರೊ. ಸಿದ್ರಾಮಪ್ಪ ಮಾಸಿಮಾಡೆ ಅಧ್ಯಕ್ಷತೆ ವಹಿಸಿದ್ದರು.

ADVERTISEMENT

ಸಾಹಿತಿ ಚಂದ್ರಪ್ಪ ಹೆಬ್ಬಾಳಕರ್, ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷೆ ಪಾರ್ವತಿ ಸೋನಾರೆ, ಅಜೀತ್ ನೇಳಗೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.