ADVERTISEMENT

ಹುಮನಾಬಾದ್: ಮಳೆಗೆ ಸೇತುವೆ ಹಾನಿ, ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2021, 3:42 IST
Last Updated 12 ಜುಲೈ 2021, 3:42 IST
ಹುಮನಾಬಾದ್ ತಾಲ್ಲೂಕಿನ ಬೋತಗಿ ಹತ್ತಿರದ ಸೇತುವೆ ಮಳೆಗೆ ಹಾನಿ ಆಗಿರುವ ಸ್ಥಳಕ್ಕೆ ಶಾಸಕ ರಾಜಶೇಖರ ಪಾಟೀಲ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು
ಹುಮನಾಬಾದ್ ತಾಲ್ಲೂಕಿನ ಬೋತಗಿ ಹತ್ತಿರದ ಸೇತುವೆ ಮಳೆಗೆ ಹಾನಿ ಆಗಿರುವ ಸ್ಥಳಕ್ಕೆ ಶಾಸಕ ರಾಜಶೇಖರ ಪಾಟೀಲ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು   

ಹುಮನಾಬಾದ್: ಶನಿವಾರ ರಾತ್ರಿ ಸುರಿದ ಮಳೆಗೆ ತಾಲ್ಲೂಕಿನ ಹುಡಗಿ ಹಾಗೂ ಬೋತಗಿ ಗ್ರಾಮಗಳಲ್ಲಿ ರಸ್ತೆ, ಸೇತುವೆ ಹಾನಿ ಆಗಿರುವ ಸ್ಥಳಕ್ಕೆ ಶಾಸಕ ರಾಜಶೇಖರ ಪಾಟೀಲ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು. ‘ತಾಲ್ಲೂಕಿನಲ್ಲಿ ಮಳೆಯಿಂದ ಹಾನಿ ಆಗಿರುವ ಮನೆ, ರೈತರ ಬೆಳೆ, ರಸ್ತೆ ಬಗ್ಗೆ ಶೀಘ್ರವಾಗಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ’ ಅಧಿಕಾರಿಗಳಿಗೆ ಸೂಚಿಸಿದರು.

ಹಳ್ಳಿಖೇಡ (ಬಿ) ಪುರಸಭೆ ಅಧ್ಯಕ್ಷ ಮಹಾಂತಯ್ಯ ತೀರ್ಥ, ಪ್ರಮುಖರಾದ ಶಿವರಾಜ ಗಂಗಶೆಟ್ಟಿ, ತಹಶೀಲ್ದಾರ್ ನಾಗಯ್ಯ ಹಿರೇಮಠ, ತಾ.ಪಂ. ಇಒ ಡಾ.ಗೋವಿಂದ, ಪಿಡಬ್ಲ್ಯುಡಿ ಎಇಇ ಶಶಿಧರ ಪಾಟೀಲ, ಜಿ.ಪಂ ಎಇಇ ವಾಮನರಾವ ಜಾಧವ, ಜೆಇಗಳಾದ ಶಿವಕುಮಾರ ಕೌಟಗೆ, ರಾಜಕುಮಾರ ಕಲಬುರ್ಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT