ADVERTISEMENT

ಬೆಳಕುಣಿ ಸೇತುವೆ ಸಂಚಾರ ಸ್ಥಗಿತ: ಔರಾದ್ ತಾಲ್ಲೂಕಿನ ವಿವಿಧೆಡೆ ಭಾರಿ ಮಳೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2021, 3:59 IST
Last Updated 3 ಜೂನ್ 2021, 3:59 IST
ಔರಾದ್ ತಾಲ್ಲೂಕಿನ ಬೆಳಕುಣಿ ಬಳಿಯ ಸೇತುವೆ ಮೇಲೆ ನೀರು ಹರಿಯಿತು
ಔರಾದ್ ತಾಲ್ಲೂಕಿನ ಬೆಳಕುಣಿ ಬಳಿಯ ಸೇತುವೆ ಮೇಲೆ ನೀರು ಹರಿಯಿತು   

ಔರಾದ್: ತಾಲ್ಲೂಕಿನ ವಿವಿಧೆಡೆ ಬುಧವಾರ ಭಾರಿ ಮಳೆಯಾಗಿ ಕೆಲ ಕಡೆ ಸಂಚಾರ ಸ್ಥಗಿತಗೊಂಡಿದೆ. ಸಂತಪುರ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಒಂದು ಗಂಟೆ ಕಾಲ ಭಾರಿ ಮಳೆ ಸುರಿದಿದೆ.

ಭಾಲ್ಕಿ-ಔರಾದ್ ರಸ್ತೆಯ ಬೆಳಕುಣಿ ಬಳಿ ಸೇತುವೆ ಮೇಲಿಂದ ನೀರು ಹರಿದು ಅರ್ಧ ಗಂಟೆ ಸಂಚಾರ ಸ್ಥಗಿತವಾಗಿದೆ. ಸಂತಪುರನಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಆಸ್ಪತ್ರೆ ಆವರಣದಲ್ಲಿ ನೀರು ನುಗ್ಗಿ ರೋಗಿಗಳು ಪರದಾಡಬೇಕಾಯಿತು.

‘ಪಂಚಾಯಿತಿಯವರು ನೀರು ಹೋಗಲು ಸರಿಯಾದ ವ್ಯವಸ್ಥೆ ಮಾಡದ ಕಾರಣ ಮಳೆ ಬಂದಾಗ ಇಂತಹ ಸಮಸ್ಯೆ ಆಗುತ್ತಿದೆ’ ಎಂದು ಸಂತಪುರ ನಿವಾಸಿ ಮಂಜುನಾಥ ಸ್ವಾಮಿ ದೂರಿದರು.

ADVERTISEMENT

ಕಳಪೆ ಕಾಮಗಾರಿ: ‘ಬೆಳಕುಣಿ ಗ್ರಾಮದ ಬಳಿ ಸೇತುವೆ ಕಾಮಗಾರಿ ಸರಿಯಾಗಿಲ್ಲ. ಒಂದೇ ಮಳೆಗೆ ಹಾಳಾಗಿದೆ. ಇದರಿಂದ ಇಲ್ಲಿ ಓಡಾಡುವ ಪ್ರಯಾಣಿಕರಲ್ಲಿ ಭೀತಿ ಆವರಿಸಿದೆ’ ಎಂದು ಬೆಳಕುಣಿ ನಿವಾಸಿ ಜಾವಿದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಧಾರಣ ಮಳೆ
ಬೀದರ್‌:
ಜಿಲ್ಲೆಯ ವಿವಿಧೆಡೆ ಬುಧವಾರ ಸಾಧಾರಣ ಮಳೆಯಾಗಿದೆ. ಹುಮನಾಬಾದ್‌, ಚಿಟಗುಪ್ಪ, ಬಸವಕಲ್ಯಾಣ ಹಾಗೂ ಭಾಲ್ಕಿ ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.