ಔರಾದ್: ಭಾರತ- ಪಾಕಿಸ್ತಾನ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಔರಾದ್ ತಾಲ್ಲೂಕಿನ ಆಲೂರ್ (ಬಿ) ಗ್ರಾಮದ ಯೋಧ ಬಸವರಾಜ ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ಜುಲೈ 6ರಂದು ಸಂಜೆ 5.40ಕ್ಕೆ ತಮ್ಮ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಕ್ಷಣ ಅವರನ್ನು ಪಂಜಾಬನಫಜಿಲ್ಕಾ ಸೇನಾ ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟರಲ್ಲಿ ಕೊನೆಯುಸಿರೆಳೆದಿದ್ದರು’ ಎಂದು ಬಿಎಸ್ಎಫ್ ಡೆಪ್ಯುಟಿ ಕಮಾಂಡೆಂಟ್ ಸುರಿಂದರ್ಕುಮಾರ ಅವರು ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಂದೇಶ ಕಳಿಸಿದ್ದಾರೆ.
‘ಯೋಧನ ಮೃತದೇಹ ವಿಮಾನದ ಮೂಲಕ ಬೆಳಿಗ್ಗೆ ದೆಹಲಿಯಿಂದ ಹೈದರಾಬಾದ್ಗೆ ಬರಲಿದೆ. ಅಲ್ಲಿಂದ ಸೇನಾ ವಾಹನದಲ್ಲಿ ಆಲೂರ್ (ಬಿ) ಗ್ರಾಮಕ್ಕೆ ಬರಲಿದೆ’ ಎಂದು ಸಂತಪುರ ಪಿಎಸ್ಐ ಸಿದ್ದಲಿಂಗ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.