ಬಸವಕಲ್ಯಾಣ: ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಪ್ರಚಾರಕ್ಕಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಏ.12ಕ್ಕೆ ಬಸವಕಲ್ಯಾಣ ತಾಲ್ಲೂಕಿನ ವಿವಿಧೆಡೆ ಸಭೆ ನಡೆಸುವರು.
ಮಧ್ಯಾಹ್ನ 12 ಗಂಟೆಗೆ ತಾಲ್ಲೂಕಿನ ಲಾಡವಂತಿ ಗ್ರಾಮದಲ್ಲಿನ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳುವರು. ಬಳಿಕ ಹಾರಕೂಡ ಹಿರೇಮಠ ಸಂಸ್ಥಾನಕ್ಕೆ ಭೇಟಿ ನೀಡುವರು.
ಮಧ್ಯಾಹ್ನ 3.45 ಕ್ಕೆ ಮುಡಬಿಯಲ್ಲಿ ಬಹಿರಂಗ ಸಭೆ ನಡೆಸುವರು.
ಸಂಜೆ 6ಕ್ಕೆ ಹುಲಸೂರನಲ್ಲಿ ಪ್ರಚಾರ ಕೈಗೊಳ್ಳುವರು. ಅಲ್ಲಿಂದ ಹೊರಟು ಬಸವಕಲ್ಯಾಣಕ್ಕೆ ಬಂದು 7.45 ಕ್ಕೆ ನಗರದಲ್ಲಿ ಗಣ್ಯರೊಂದಿಗೆ ಚರ್ಚಿಸುವರು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.