
ಪ್ರಜಾವಾಣಿ ವಾರ್ತೆ
ಸಾಂದರ್ಭಿಕ ಚಿತ್ರ
ಭಾಲ್ಕಿ: ‘ಸರ್ಕಾರಿ ಬಸ್ಗಳ ಕೊರತೆಯಿಂದಾಗಿ ಗುರುವಾರ ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ, ಶಾಲೆ, ಕಾಲೇಜುಗಳಿಗೆ ತೆರಳಲು ತೊಂದರೆ ಉಂಟಾಗಿದೆ’ ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸುರೇಶ ಬಿರಾದಾರ ದೂರಿದ್ದಾರೆ.
‘ಬಸವಕಲ್ಯಾಣದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿನಂದನಾ ಸಮಾರಂಭಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಕರೆತರಲು ಜಿಲ್ಲೆಯ ಎಲ್ಲ ತಾಲ್ಲೂಕು ಬಸ್ ಘಟಕಗಳಿಂದ ಬಸ್ಗಳನ್ನು ಬಳಸಿಕೊಂಡಿದ್ದರಿಂದ ಪಿಯುಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗಳು ತುಂಬಾ ಅನಾನುಕೂಲ ಅನುಭವಿಸಿದರು’ ಎಂದು ದೂರಿದ್ದಾರೆ. ಜಿಲ್ಲೆಯ ಪಿಯುಸಿ ಫಲಿತಾಂಶದಲ್ಲಿ ವ್ಯತ್ಯಾಸ ಆದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೇ ನೇರ ಹೊಣೆಗಾರರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.