ಬೀದರ್: ಇಲ್ಲಿಯ ನೌಬಾದ್ನಲ್ಲಿ ಶನಿವಾರ ಕೆನರಾ ಬ್ಯಾಂಕ್ ಎಟಿಎಂಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಎಟಿಎಂ ಕೇಂದ್ರದಲ್ಲಿನ ಎಟಿಎಂ ಯಂತ್ರ ಹಾಗೂ ಉಪಕರಣಗಳು ಸುಟ್ಟು ಹೋಗಿವೆ. ಬ್ಯಾಂಕ್ ಅಧಿಕಾರಿಗಳ ಪ್ರಕಾರ ಎಟಿಎಂ ಯಂತ್ರದಲ್ಲಿ ₹14 ಲಕ್ಷ ಜಮಾ ಮಾಡಲಾಗಿತ್ತು. ಈ ಪೈಕಿ ಎಷ್ಟು ಹಣ ಸುಟ್ಟು ಹೋಗಿದೆ ಎನ್ನುವುದು ಗೊತ್ತಾಗಿಲ್ಲ.
ಮುಂಬೈನಿಂದ ವಿಶೇಷ ತಂಡ ಬಂದು ಪರಿಶೀಲನೆ ನಡೆಸಲಿದೆ. ಅದರ ನಂತರವೇ ಸಂಪೂರ್ಣ ಮಾಹಿತಿ ದೊರಕಲಿದೆ ಎಂದು ಹೇಳಿದ್ದಾರೆ.
ಅಗ್ನಿ ಅನಾಹುತದ ಮಾಹಿತಿ ದೊರೆಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಬೆಂಕಿ ಅನಾಹುತಕ್ಕೆ ಕಾರಣ ತಿಳಿದಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.