ADVERTISEMENT

ಕಾರು ಪಲ್ಟಿ: ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2021, 3:49 IST
Last Updated 18 ಸೆಪ್ಟೆಂಬರ್ 2021, 3:49 IST

ಬಸವಕಲ್ಯಾಣ: ಇಲ್ಲಿಗೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಕಾರು ಪಲ್ಟಿ ಆಗಿದ್ದರಿಂದ ಹೈದರಾಬಾದ್ ಮೂಲದ ಜಾಫರ್ (24) ಎಂಬುವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಾಯಗಳಾಗಿವೆ. ಈ ಬಗ್ಗೆ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವ್ಯಕ್ತಿ ಆತ್ಮಹತ್ಯೆ

ಬಸವಕಲ್ಯಾಣ: ತಾಲ್ಲೂಕಿನ ಚಿಟ್ಟಾ(ಕೆ) ಗ್ರಾಮದಲ್ಲಿ ರಾಜಕುಮಾರ ರಾಮತಿರೆ(45) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ADVERTISEMENT

ಪಿಕೆಪಿಎಸ್ ಹಾಗೂ ಇತರೆ ಬ್ಯಾಂಕ್‌ಗಳಲ್ಲಿ ಸುಮಾರು ₹ 2 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದರಿಂದ ಅದನ್ನು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಂಠಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಬ್ ಇನ್‌ಸ್ಪೆಕ್ಟರ್ ಜಯಶ್ರೀ ಹೂಡಲ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.